Webdunia - Bharat's app for daily news and videos

Install App

ಟೊಮೆಟೊ ಕೆಚಪ್, ಬೆಲ್ಲದಲ್ಲೂ ರಾಸಾಯನಿಕ ಪತ್ತೆ: ಇಲ್ಲಿದೆ ವಿವರ

Krishnaveni K
ಮಂಗಳವಾರ, 4 ಮಾರ್ಚ್ 2025 (12:38 IST)
ಬೆಂಗಳೂರು: ಇಡ್ಲಿ, ಬಟಾಣಿ ಬಳಿಕ ಈಗ ಚಪ್ಪರಿಸಿಕೊಂಡು ಸೇವಿಸುವ ಟೊಮೆಟೊ ಕೆಚಪ್, ಬೆಲ್ಲದಲ್ಲೂ ಅಪಾಯಕಾರೀ ರಾಸಾಯನಿಕವಿರುವುದು ಪತ್ತೆಯಾಗಿದೆ. ಇದರ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ ನೋಡಿ.

ಆಹಾರ ಗುಣಮಟ್ಟ ಮತ್ತು ಸುರಕ್ಷತಾ ವಿಭಾಗ ಈಗ ಹಲವು ಆಹಾರ ವಸ್ತುಗಳ ಸ್ಯಾಂಪಲ್ ಪರೀಕ್ಷಿಸಿ ಗುಣಮಟ್ಟದ ವಿವರ ಬಹಿರಂಗಗೊಳಿಸುತ್ತಿದೆ. ಅದರಂತೆ ಈಗಾಗಲೇ ಇಡ್ಲಿ ತಯಾರಿಕೆಗೆ ಪ್ಲಾಸ್ಟಿಕ್ ಕವರ್ ಬಳಸುವುದರಿಂದ ಕ್ಯಾನ್ಸರ್ ಕಾರಕ ಅಂಶ ಹೊರಸೂಸುತ್ತದೆ ಎನ್ನುವುದು ಪತ್ತೆಯಾಗಿತ್ತು. ಹಸಿರು ಬಟಾಣಿಗೆ ಹಾಕುವ ಕೃತಕ ಬಣ್ಣಗಳಿಂದಲೂ ಆರೋಗ್ಯ ಸಮಸ್ಯೆಯಾಗುತ್ತದೆ ಎನ್ನುವುದು ಪತ್ತೆಯಾಗಿತ್ತು.

ಇದೀಗ ಟೊಮೆಟೊ ಕೆಚಪ್ ಮತ್ತು ಬೆಲ್ಲದಲ್ಲೂ ಕೃತಕ ಬಣ್ಣ, ರಾಸಾಯನಿಕ ಪತ್ತೆಯಾಗಿದೆ. ಟೊಮೆಟೊ ಕೆಚಪ್ ಕೆಂಪಗೆ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದ್ದು, ಇದು ಅಪಾಯಕಾರೀ ಸಮಸ್ಯೆ ತಂದೊಡ್ಡಬಲ್ಲದು ಎಂದು ತಿಳಿದುಬಂದಿದೆ. ಟೊಮೆಟೊ ಕೆಚಪ್ ನಲ್ಲಿ ಸೋಡಿಯಂ ಬೆಂಜೊಯೆಟ್ ಎಂಬ ರಾಸಾಯನಿಕ ಮಿಕ್ಸ್ ಮಾಡಲಾಗುತ್ತಿದೆ.

ಅದೇ ರೀತಿ ಬೆಲ್ಲದಲ್ಲೂ ರಾಸಾಯನಿಕ ಬಳಕೆಯಾಗುತ್ತಿದೆ ಎಂದು ತಿಳಿದುಬಂದಿದೆ. ಬೆಲ್ಲದಲ್ಲಿ ಅಪಾಯಕಾರೀ ಸಲ್ಫರ್ ಡೈ ಆಕ್ಸೈಡ್ ಮತ್ತು ಕೃತಕ ಬಣ್ಣ ಮಿಕ್ಸ್ ಮಾಡಲಾಗುತ್ತಿದೆ ಎಂಬ ಅಂಶ ಬೆಳಕಿಗೆ ಬಂದಿದೆ. ಇದು ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದಾಗಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಎರಡನೇ ದಿನ ಹುಡುಕಾಡುತ್ತಿರುವ ಎಸ್ಐಟಿ ತಂಡಕ್ಕೆ ಸಿಕ್ಕಿದ್ದೇನು

ಧರ್ಮಸ್ಥಳ: 6 ಅಡಿ ಅಗೆದರೂ ಸಿಗದ ಕಳೆಬರಹ, ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

ಮುಂದಿನ ಸುದ್ದಿ
Show comments