ಮಂಗಳೂರು: ವಿಧಾನಸಭಾ ಕಾರ್ಯಾಲಯದ ಮೂಲಕ ಕೈಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ಯಾರಿಗಾದರೂ ಸಂಶಯವಿದ್ದಲ್ಲಿ, ಅಥವಾ ಮಾಹಿತಿ ಕೇಳುವುದಿದ್ದರೆ ನಾಳೆ ನಾನು ಬೆಂಗಳೂರಿನಲ್ಲಿ ಲಭ್ಯವಿದ್ದೇನೆ.  ಕಚೇರಿಗೆ ಬಂದು ಲಿಖಿತವಾಗಿ ದೂರು ಸಲ್ಲಿಸಲಿ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು.
 
									
			
			 
 			
 
 			
					
			        							
								
																	ವಿಧಾನಸಭೆಯ ಮಾಜಿ ಅಧ್ಯಕ್ಷರೂ ಆಗಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಸಭಾ ಕಾರ್ಯಾಲಯದ ಬಗ್ಗೆ ಮಾಡಿರುವ ಆರೋಪ ಸಂಬಂಧ ಇಂದು ಅವರು ಪ್ರತಿಕ್ರಿಯಿಸಿ,  ರಾಜಕೀಯ ವ್ಯಕ್ತಿಯಾಗಿರುವ ಶಾಸಕ, ಸಂಸದರಾಗಿ ಗೌರವಯುತ ಸ್ಥಾನದಲ್ಲಿದ್ದರು.  ಅವರ ಆಲೋಚನೆಗಳಿಗೆ ಗೌರವವಿಸುತ್ತಿದ್ದು, ಹೇಳಬೇಕಾದ ವಿಚಾರಗಳನ್ನು ಲಿಖಿತವಾಗಿ ನೀಡಿದರೆ, ಅದರಲ್ಲಿ ಏನಿದೆ ಪರಿಶೀಲಿಸುತ್ತೇನೆ. ಅದರಂತೆ ವಿಧಾನಸಭೆ ಗೌರವ ಹೆಚ್ಚು ಮಾಡಲು ಕ್ರಮ ವಹಿಸುತ್ತೇನೆ. ಈ ಕುರಿತ ಸಕಾರಾತ್ಮಕ ಚರ್ಚೆಗೆ ಸಿದ್ಧ ಎಂದರು.
									
										
								
																	ಕರ್ನಾಟಕ ವಿಧಾನಸಭೆಗೆ ರಾಜ್ಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲೂ ಗೌರವವಿದೆ. ಎಲ್ಲ ರೋಗಕ್ಕೆ ಮದ್ದು ಇದೆ. ಅಸೂಯೆಗೆ ಮದ್ದಿಲ್ಲ. ಹೊಸತಾಗಿ ಮನೆ ನಿರ್ಮಿಸುವವರು ಕಟ್ಟಡಕ್ಕೆ ದೃಷ್ಟಿ ಬೀಳಬಾರದು ಎಂದು ದೃಷ್ಟಿಬೊಂಬೆ ಕಟ್ಟುತ್ತಾರೆ. ಅವರ ಆರೋಪ ಕಟ್ಟಡದ ದೃಷ್ಟಿಬೊಂಬೆ ಇದ್ದಂತೆ ಎಂದರು.
									
											
							                     
							
							
			        							
								
																	ರಾಜಕೀಯವಾಗಿ ಹೇಳಲು ನನಗೂ ಬಹಳಷ್ಟು ವಿಚಾರವಿದೆ.  ರಾಜಕೀಯವಾಗಿ ಅವರು ಮಾತನಾಡಬಹುದು. ಆದರೆ ನಾನು ಸಂವಿಧಾನಬದ್ಧ ಹುದ್ದೆಯಲ್ಲಿದ್ದೇನೆ. ನಾನೀಗ ಪ್ರತಿಪಕ್ಷದ ಮಿತ್ರ ಎಂದರು.