Select Your Language

Notifications

webdunia
webdunia
webdunia
webdunia

ಕಬ್ಬು ಬೆಳೆಗಾರರ ಸಂಘದಿಂದ ನಾಳೆ ರಾಜ್ಯಾದ್ಯಂತ ಬಂದ್

ಕಬ್ಬು ಬೆಳೆಗಾರರ ಸಂಘದಿಂದ ನಾಳೆ ರಾಜ್ಯಾದ್ಯಂತ ಬಂದ್
ಮೈಸೂರು , ಶುಕ್ರವಾರ, 4 ಸೆಪ್ಟಂಬರ್ 2015 (14:47 IST)
ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಗಣಿಸದೆ ನಿರ್ಲಕ್ಷಿಸುತ್ತಿದೆ ಎಂಬ ಕಾರಣದಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘವು ನಾಳೆ ರಾಜ್ಯಾದ್ಯಂತ ಬಂದ್ ಘೋಷಿಸಿದೆ. 
 
ಈ ಬಗ್ಗೆ ಸಂಘದ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಅವರು ಮೈಸೂರಿನಲ್ಲಿ ಈ ಮಾಹಿತಿ ನೀಡಿದ್ದು, ಮಾಧ್ಯಮಗಳೊಂದಿಗೆ ಮಾತನಾಡಿದರು. ಸುಮಾರು 32 ರತೈಪರ ಸಂಘಟನೆಗಳು ಈ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ನಾಳೆ ರಾಜ್ಯಾದ್ಯಂತ ಬಂದ್ ನಡೆಸಲಾಗುತ್ತದೆ. ಆ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದೇವೆ ಎಂದರು. 
 
ಇದೇ ವೇಳೆ, ನಾಳೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ಬಂದ್ ಘೋಷಿಸಲಾಗಿದ್ದು, ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಒಂದು ವೇಳೆ ನಡೆದಲ್ಲಿ ಅದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರಾಗುತ್ತಾರೆ ಎಂದೂ ಎಚ್ಚರಿಕೆ ನೀಡಿದರು. 

Share this Story:

Follow Webdunia kannada