Webdunia - Bharat's app for daily news and videos

Install App

ಕಬ್ಬು ಬೆಳೆಗಾರರ ಸಂಘದಿಂದ ನಾಳೆ ರಾಜ್ಯಾದ್ಯಂತ ಬಂದ್

Webdunia
ಶುಕ್ರವಾರ, 4 ಸೆಪ್ಟಂಬರ್ 2015 (14:47 IST)
ರಾಜ್ಯ ಸರ್ಕಾರವು ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಗಣಿಸದೆ ನಿರ್ಲಕ್ಷಿಸುತ್ತಿದೆ ಎಂಬ ಕಾರಣದಿಂದ ರಾಜ್ಯ ಕಬ್ಬು ಬೆಳೆಗಾರರ ಸಂಘವು ನಾಳೆ ರಾಜ್ಯಾದ್ಯಂತ ಬಂದ್ ಘೋಷಿಸಿದೆ. 
 
ಈ ಬಗ್ಗೆ ಸಂಘದ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಅವರು ಮೈಸೂರಿನಲ್ಲಿ ಈ ಮಾಹಿತಿ ನೀಡಿದ್ದು, ಮಾಧ್ಯಮಗಳೊಂದಿಗೆ ಮಾತನಾಡಿದರು. ಸುಮಾರು 32 ರತೈಪರ ಸಂಘಟನೆಗಳು ಈ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದ್ದು, ನಾಳೆ ರಾಜ್ಯಾದ್ಯಂತ ಬಂದ್ ನಡೆಸಲಾಗುತ್ತದೆ. ಆ ಮೂಲಕ ಸರ್ಕಾರದ ಗಮನ ಸೆಳೆಯಲಿದ್ದೇವೆ ಎಂದರು. 
 
ಇದೇ ವೇಳೆ, ನಾಳೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯಕ್ರಮ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಈ ಬಂದ್ ಘೋಷಿಸಲಾಗಿದ್ದು, ಪ್ರತಿಭಟನೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆಯಬಾರದು. ಒಂದು ವೇಳೆ ನಡೆದಲ್ಲಿ ಅದಕ್ಕೆ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರೇ ನೇರ ಹೊಣೆಗಾರರಾಗುತ್ತಾರೆ ಎಂದೂ ಎಚ್ಚರಿಕೆ ನೀಡಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments