Webdunia - Bharat's app for daily news and videos

Install App

ಮಂಡ್ಯದಲ್ಲಿ ಅಂಬಿಗೆ ನುಡಿನಮನ ನಾಳೆ

Webdunia
ಶುಕ್ರವಾರ, 11 ಜನವರಿ 2019 (17:15 IST)
ಕಳೆದ ನವೆಂಬರ್ ನಲ್ಲಿ ವಿಧಿವಶರಾದ ಕಲಿಯುಗ ಕರ್ಣ, ರೆಬಲ್ ಸ್ಟಾರ್ ಅಂಬರೀಷ್ ಅವರ ಶ್ರದ್ಧಾಂಜಲಿ ಸಭೆ ಹಾಗೂ ನುಡಿ ನಮನ ಕಾರ್ಯಕ್ರಮವನ್ನ ಅಂಬಿ ಹುಟ್ಟೂರು ಮಂಡ್ಯದಲ್ಲಿ ಆಯೋಜಿಸಲಾಗಿದೆ.

ಜನವರಿ 12ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ಸಮಾವೇಶಕ್ಕೆ ಅಂಬಿ ಕುಟುಂಬ ಸೇರಿದಂತೆ ರಾಜಕೀಯ ನಾಯಕರು, ಸಿನಿ ದಿಗ್ಗಜರು ಭಾಗವಹಿಸುತ್ತಿದ್ದಾರೆ.

ನಾಳೆ ಸಕ್ಕರೆ ನಾಡು ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ನಟ ದಿವಂಗತ ಅಂಬರೀಷ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮ ಹಾಗೂ ನುಡಿ ನಮನ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸುಮಾರು ಒಂದು ಲಕ್ಷ ಹೆಚ್ಚು ಅಭಿಮಾನಿಗಳನ್ನು ಸೇರಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘ ಈ ಕಾರ್ಯಕ್ರಮ ರೂಪಿಸಿದೆ. ಆದಿಚುಂಚನಗಿರಿ ಮಠಾಧೀಶ ನಿರ್ಮಲಾನಂದ ಶ್ರೀ ಕಾರ್ಯಕ್ರಮದ ಸಾನಿಧ್ಯ ವಹಿಸಲಿದ್ದಾರೆ.

ಅಂಬಿ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಭಾಗವಹಿಸಲಿದ್ದು, ಇವರ ಜೊತೆಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಡಿಸಿಎಂ ಡಾ.ಜಿ.ಪರಮೇಶ್ವರ್, ಮಾಜಿ ಸಿಎಂ ಎಸ್.ಎಂ.ಕೃಷ್ಣ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಕೆ.ಶಿವಕುಮಾರ್, ಡಿ.ಸಿ.ತಮ್ಮಣ್ಣ ಸೇರಿದಂತೆ ಸ್ಯಾಂಡಲ್ ವುಡ್ ನಟರಾದ ದರ್ಶನ್, ಸುದೀಪ್, ಯಶ್, ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಕನಗನಮರಡಿ ದುರಂತದಲ್ಲಿ ಸಾವನ್ನಪ್ಪಿದ 30 ಮಂದಿ ಹಾಗೂ ಅಂಬಿ ಮೃತಪಟ್ಟಾಗ ಆಘಾತದಿಂದ ಆತ್ಮಹತ್ಯೆ ಮಾಡಿಕೊಂಡ ಇಬ್ಬರು ಅಭಿಮಾನಿಗಳಿಗೆ ಇದೇ ಸಂದರ್ಭದಲ್ಲಿ ಆರ್ಥಿಕ ಸಹಾಯ ಮಾಡಲು ತೀರ್ಮಾನಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ಕೋಮುಗಲಭೆ ನಿಗ್ರಹಕ್ಕೆ ಹೊಸ ಮದ್ದು: ಆ್ಯಂಟಿ ಕಮ್ಯುನಲ್ ಟಾಸ್ಕ್ ಫೋರ್ಸ್ ರಚನೆ

Gold Price Today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

India Pakistan: ಒಂಭತ್ತನೇ ಬಾರಿ ಗಡಿಯಲ್ಲಿ ಪಾಕಿಸ್ತಾನ ದಾಳಿ: ಭಾರತೀಯ ಸೇನೆ ಏನು ಮಾಡಿದೆ ನೋಡಿ

Mangaluru Suhas Shetty murder: ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳು ಅರೆಸ್ಟ್: ಓರ್ವ ಹಿಂದೂ ವ್ಯಕ್ತಿಯಿಂದಲೇ ಆರೋಪಿಗಳಿಗೆ ಸಹಾಯ

ಮುಂದಿನ ಸುದ್ದಿ
Show comments