Webdunia - Bharat's app for daily news and videos

Install App

ನಾಳೆ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ಚುನಾವಣೆ: ಎಚ್.ಡಿ.ದೇವೇಗೌಡ

Webdunia
ಗುರುವಾರ, 8 ಡಿಸೆಂಬರ್ 2016 (16:45 IST)
ಜೆಡಿಎಸ್ ರಾಜ್ಯಾಧ್ಯಕ್ಷರ ಹುದ್ದೆಗೆ ನಾಳೆ ಚುನಾವಣೆ ನಡೆಯಲಿದೆ. ಬೇರೆಯವರು ಜವಾಬ್ದಾರಿ ಹೊರಲು ಸಿದ್ದವಾದರೆ ನನ್ನ ಸಮ್ಮತಿಯಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ರಾಜ್ಯಾಧ್ಯಕ್ಷರ ಚುನಾವಣೆಗೆ ಎಚ್.ಡಿ.ಕುಮಾರಸ್ವಾಮಿಯನ್ನೇ ನಿಲ್ಲಿಸಬೇಕು ಎಂದಿಲ್ಲ. ಬೇರೆಯವರು ಪಕ್ಷದ ಹೊಣೆ ಹೊರಲು ಸಿದ್ದವಾದರೆ ಒಪ್ಪಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
 
ಜೆಡಿಎಸ್ ಪಕ್ಷ ಅಪ್ಪ ಮಕ್ಕಳ ಪಕ್ಷವಲ್ಲ. ಪಕ್ಷದ ಹಿತಕ್ಕಾಗಿ ದುಡಿಯಲು ಯಾರೇ ಮುಂದೆ ಬಂದರೂ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಸ್ವೀಕರಿಸಲು ಪಕ್ಷ ಸಿದ್ದವಿದೆ ಎಂದು ಸ್ಪಷ್ಟಪಡಿಸಿದರು.
 
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳಂತೆ ಜೆಡಿಎಸ್ ಪಕ್ಷಕ್ಕೆ ಹೈಕಮಾಂಡ್ ಮೊರೆ ಹೋಗುವ ಅಗತ್ಯವಿಲ್ಲ. ಜೆಡಿಎಸ್ ಜನತೆಯ ಪಕ್ಷವಾಗಿದೆ. ರಾಜ್ಯ ಅಭಿವೃದ್ಧಿ ಪಥಧತ್ತ ಸಾಗಲು ಪ್ರಾದೇಶಿ ಪಕ್ಷಗಳ ಬಲವರ್ಧನೆ ಅಗತ್ಯವಾಗಿದೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments