ನಾಳೆ ಕರ್ನಾಟಕಕ್ಕೆ ಪ್ರಧಾನಿ ಮೋದಿ: ಈಶ್ವರಪ್ಪ ಮನವೊಲಿಕೆಗೆ ಕಮಲ ನಾಯಕರ ಸರ್ಕಸ್

Sampriya
ಭಾನುವಾರ, 17 ಮಾರ್ಚ್ 2024 (14:17 IST)
Photo Courtesy Facebook
ಶಿವಮೊಗ್ಗ: ಲೋಕಸಭಾ ಚುನಾವಣೆಗೆ   ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿಯಿಂದ ಟಿಕೆಟ್ ಕೈತಪ್ಪಿದ ನಂತರ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ  ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 
 
ಇದೀಗ ಈಶ್ವರಪ್ಪ ಅವರ ನಡೆ ಬಿಜೆಪಿಗೆ ದೊಡ್ಡ ತಲೆನೋವಾಗಿದ್ದು, ಸಂಧಾನಕ್ಕೆ ಬಿಜೆಪಿ ನಾಯಕರು ಈಶ್ವರಪ್ಪ ಮನೆಗೆ ತೆರಳುತ್ತಿದ್ದಾರೆ.
 
ಈಶ್ವರಪ್ಪ ಮನವೊಲಿಸುವ ಸಲುವಾಗಿ ಇಂದು ಬಿಜೆಪಿ ಮುಖಂಡರು ಮನೆಗೆ ಭೇಟಿ ನೀಡುತ್ತಿದ್ದಾರೆ. ಭಾನುವಾರ ಬೆಳಗ್ಗೆಯಿಂದಲೇ ಕೆ.ಎಸ್.ಈಶ್ವರಪ್ಪ ಮನೆಗೆ ಬಿಜೆಪಿ ನಾಯಕರು ಬರುತ್ತಿದ್ದು, ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹಾಗೂ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಬಂದು ಈಶ್ವರಪ್ಪ ‌ಅವರ ಮನವೊಲಿಸುವ ಪ್ರಯತ್ನ ಮಾಡಿದರು. ಸಂಧಾನಕ್ಕೆ ಈಶ್ವರಪ್ಪ ಮಣಿಯದ ಹಿನ್ನೆಲೆಯಲ್ಲಿ ವಾಪಸ್ ಮರಳಿದರು.
 
ಮಧ್ಯಾಹ್ನ ಬಿಜೆಪಿ ಹೈಕಮಾಂಡ್ ಪರವಾಗಿ ಈಶ್ವರಪ್ಪ ಮನೆಗೆ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮೋಹನ ಅಗರವಾಲ್ ಹಾಗೂ ರಾಜೇಶ್ ಬಂದಿದ್ದು, ಈಶ್ವರಪ್ಪ ನಿವಾಸದಲ್ಲಿ ಸಭೆ ನಡೆಸುತ್ತಿದ್ದಾರೆ.
 
ನಾಳೆ ಪ್ರಧಾನಿ ಕರ್ನಾಟಕಕ್ಕೆ ಆಗಮನ: ಆದ್ದರಿಂದ ಈಶ್ವರಪ್ಪ ಅವರ ಮನವೊಲಿಕೆ ಪ್ರಕ್ರಿಯೆ ಜೋರಾಗಿಯೇ ನಡೆಯುತ್ತಿದೆ. ಆದರೆ ಈಶ್ವರಪ್ಪ ಅವರು ಯಾವುದಕ್ಕೂ ಬಗ್ಗದೆ, ಸ್ಪರ್ಧೆ ಮಾಡಿಯೇ ಸಿದ್ಧ ಎಂದು ಎನ್ನುತ್ತಿದ್ದಾರೆ.
 
ಈಶ್ವರಪ್ಪ ಶನಿವಾರ ಸಾಗರ ಬಳಿಯ ವರದಾಪುರದ ಶ್ರೀಧರ ಆಶ್ರಮಕ್ಕೆ ಭೇಟಿ ನೀಡಿದ ನಂತರ ಲೋಕಸಭಾ ಚುನಾವಣೆಗೆ ಪ್ರಚಾರ ಕಾರ್ಯ ಶುರು ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಗಿಯದ ಇಂಡಿಗೋ ವಿಮಾನದ ರಗಳೆ: ಹುಬ್ಬಳ್ಳಿಯಲ್ಲಿ ವಧು ವರರಿಲ್ಲದೇ ನಡೆದ ನಡೆದ ಆರತಕ್ಷತೆ

ಕುರ್ಚಿ ಕದನದ ಬೆನ್ನಲ್ಲೇ ಸಚಿವರಿಗೆ ಖಡಕ್ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments