Webdunia - Bharat's app for daily news and videos

Install App

ನಾಳೆ ಕೋಟೆನಾಡಿನಲ್ಲಿ ‘ನಮೋ’ ಘರ್ಜನೆ

Webdunia
ಸೋಮವಾರ, 1 ಮೇ 2023 (19:30 IST)
ರಾಜ್ಯದ ನಾಲ್ಕು ದಿಕ್ಕಿನಲ್ಲೂ ಕಮಲವನ್ನು ಅರಳಿಸಲು ಬಿಜೆಪಿ ಟೊಂಕ ಕಟ್ಟಿ ನಿಂತಿದೆ. ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಭರ್ಜರಿ ಮತಬೇಟೆ ನಡೆಸುತ್ತಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಕೋಟೆನಾಡು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ನಗರದ ಜಯದೇವ ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ ನಡೆಯುವ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಮೊದಲು ಒನಕೆ ಓಬವ್ವ ಸ್ಟೇಡಿಯಂಗೆ ಆಗಮಿಸಲಿರುವ ಪ್ರಧಾನಿ ಮೋದಿಯವರು ಅಲ್ಲಿಂದ ಓಕಾರ್ ಮೂಲಕ ಜಯದೇವ ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ. ಈ ಹಿನ್ನೆಲೆ ನಗರದಲ್ಲಿ ಪೊಲೀಸ್​ ಬಿಗಿ ಭದ್ರತೆ ಮಾಡಲಾಗಿದೆ.. ಇನ್ನು ಬೃಹತ್ ಸಮಾವೇಶದಲ್ಲಿ ಚಿತ್ರದುರ್ಗ, ದಾವಣಗೆರೆ ಜಿಲ್ಲೆಯ ಜನ ಭಾಗಿಯಾಗಲಿದ್ದು, ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಬಿಜೆಪಿ ಪ್ರಚಾರ ಸಭೆಗೆ 75 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. 5 ಕಡೆ ವಾಹನಗಳ ಪಾರ್ಕಿಂಗ್​ಗೆ ವ್ಯವಸ್ಥೆ ಮಾಡಲಾಗಿದೆ. ಸಮಾವೇಶಕ್ಕೆ ಬಂದವರಿಗೆ ಕುಡಿಯಲು ನೀರಿನ ವ್ಯವಸ್ಥೆ ಮಾಡಲಾಗಿದೆ. ಚಿತ್ರದುರ್ಗದ 6 ಕ್ಷೇತ್ರ, ದಾವಣಗೆರೆಯ 4 ಕ್ಷೇತ್ರ ವ್ಯಾಪ್ತಿಯ ಸಮಾವೇಶ ನಡೆಯಲಿದ್ದು, 10 ಕ್ಷೇತ್ರದ ಅಭ್ಯರ್ಥಿಗಳ‌ ಪರ ಪ್ರಧಾನಿ ಮೋದಿ ಮತಯಾಚಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments