Webdunia - Bharat's app for daily news and videos

Install App

ತೀವ್ರ ಕುತೂಹಲ ಕೆರಳಿಸಿದ ರಾಜ್ಯ ಬಜೆಟ್: ರೈತರ ಸಾಲ ಮನ್ನಾ ನಿರೀಕ್ಷೆ

Webdunia
ಮಂಗಳವಾರ, 14 ಮಾರ್ಚ್ 2017 (16:22 IST)
ಬಹುನಿರೀಕ್ಷಿತ ರಾಜ್ಯ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 11.30 ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ರೈತರ ಸಾಲ ಮನ್ನಾಗೆ ಆದ್ಯತೆ ನೀಡಲಿದ್ದಾರೆಯೇ ಎನ್ನುವ ಕುತೂಹಲ ಕೆರಳಿಸಿದೆ. 
 
ರಾಜ್ಯ ಬಜೆಟ್ ಅಧಿವೇಶನ ಒಟ್ಟು 10 ದಿನಗಳ ಕಾಲ ಅಂದರೆ ಮಾರ್ಚ್ 28 ರವರೆಗೆ ನಡೆಯಲಿದ್ದು, ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪ ಸೇರಿದಂತೆ ಹಲವು ವಿಧೇಯಕಗಳಿಗೆ ತಿದ್ದುಪಡಿ ತರಲಾಗುವುದು ಎಂದು ಸ್ಪೀಕರ್ ಕೋಳಿವಾಡ್ ತಿಳಿಸಿದ್ದಾರೆ. 
 
ಬಜೆಟ್ ಅಧಿವೇಶನದಲ್ಲಿ ಶಾಸಕರ ಹಾಜರಾತಿ ಕಡ್ಡಾಯವಾಗಿದ್ದು, ಕಲಾಪ ಆರಂಭವಾದ ಒಂದು ಗಂಟೆಯ ನಂತರ ಆಗಮಿಸಿದ ಶಾಸಕರನ್ನು ಗೈರುಹಾಜರು ಎಂದು ಪರಿಗಣಿಸಲಾಗುವುದು ದಿನದಲ್ಲಿ ಎರಡು ಬಾರಿ ಶಾಸಕರ ಸಹಿಯನ್ನು ಪಡೆಯಲಾಗುತ್ತಿದ್ದು, ಶಾಸಕರ ಇರುವಿಕೆ ಅವಧಿಯನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.  
 
ಅಧಿವೇಶನ ಕಲಾಪದಲ್ಲಿ ಪಾಲ್ಗೊಂಡು ಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರದೊಂದಿಗೆ ಚರ್ಚಿಸುವುದು ಶಾಸಕರ ಕರ್ತವ್ಯ.ಜನಪ್ರತಿನಿಧಿಗಳೇ ಗೈರುಹಾಜರಾದಲ್ಲಿ ರಾಜ್ಯದ ಜನತೆಯ ಉದ್ಧಾರ ಹೇಗೆ ಸಾಧ್ಯ ಎಂದು ಸ್ಪೀಕರ್ ಕೋಳಿವಾಡ ಪ್ರಶ್ನಿಸಿದ್ದಾರೆ.

ಬಜೆಟ್‌ನಲ್ಲಿ ರೈತರ ಸಾಲ ಮನ್ನವಾಗಲಿದೆಯೇ? ಯಾವ ವಸ್ತುಗಳು ದುಬಾರಿಯಾಗಲಿವೆ, ಯಾವ ವಸ್ತುಗಳು ದರಗಳು ಇಳಿಕೆಯಾಗಲಿವೆ, ಸೇವಾ ತೆರಿಗೆ, ತಂತ್ರಜ್ಞಾನ ಕ್ಷೇತ್ರಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆಯೇ ಎನ್ನುವುದಕ್ಕೆ ನಾಳೆ ಉತ್ತರ ದೊರೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗಳ ವಿಕೋಪಕ್ಕೆ ತಿರುಗಿ ಮದುವೆ ವರನನ್ನೇ ಎತ್ತಾಕಿಕೊಂಡು ಹೋದ ನೃತ್ಯ ತಂಡದವರು

ಇಂದಿನಿಂದ ರಾಜ್ಯದಲ್ಲಿ ಕೋವಿಡ್​ ಟೆಸ್ಟಿಂಗ್ ಲ್ಯಾಬ್​ಗಳು ಓಪನ್: ಜನನಿಬಿಡ ಪ್ರದೇಶದಲ್ಲಿ ಮಾಸ್ಕ್‌ ಧರಿಸಲು ಸಲಹೆ

ಆಪರೇಷನ್ ಸಿಂಧೂರ್‌ನಿಂದ ಪಾಕ್‌ ಗಡಿಯಲ್ಲಿ ಪ್ರತಿ ಹೆಜ್ಜೆಯಿಡುವಾಗಲೂ ಯೋಚಿಸುವಂತೆ ಮಾಡಿದೆ: ಶಶಿ ತರೂರ್‌

Karnataka Weather: ವಾರದ ಮಳೆಗೆಯೇ ಸುಸ್ತಾದ ದಕ್ಷಿಣ ಕನ್ನಡ ಜನತೆ

Dehli Rain: ವಿಮಾನ ಹಾರಾಟಗಳಲ್ಲೂ ವ್ಯತ್ಯಯ ಸಾಧ್ಯತೆ, ಪ್ರಯಾಣಿಕರಿಗೆ ಹೊಸ ಸಂದೇಶ

ಮುಂದಿನ ಸುದ್ದಿ
Show comments