Webdunia - Bharat's app for daily news and videos

Install App

ತೀವ್ರ ಕುತೂಹಲ ಕೆರಳಿಸಿದ ರಾಜ್ಯ ಬಜೆಟ್: ರೈತರ ಸಾಲ ಮನ್ನಾ ನಿರೀಕ್ಷೆ

Webdunia
ಮಂಗಳವಾರ, 14 ಮಾರ್ಚ್ 2017 (16:22 IST)
ಬಹುನಿರೀಕ್ಷಿತ ರಾಜ್ಯ ಬಜೆಟ್ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸಿಎಂ ಸಿದ್ದರಾಮಯ್ಯ ಬೆಳಿಗ್ಗೆ 11.30 ಕ್ಕೆ ಬಜೆಟ್ ಮಂಡನೆ ಮಾಡಲಿದ್ದಾರೆ. ರೈತರ ಸಾಲ ಮನ್ನಾಗೆ ಆದ್ಯತೆ ನೀಡಲಿದ್ದಾರೆಯೇ ಎನ್ನುವ ಕುತೂಹಲ ಕೆರಳಿಸಿದೆ. 
 
ರಾಜ್ಯ ಬಜೆಟ್ ಅಧಿವೇಶನ ಒಟ್ಟು 10 ದಿನಗಳ ಕಾಲ ಅಂದರೆ ಮಾರ್ಚ್ 28 ರವರೆಗೆ ನಡೆಯಲಿದ್ದು, ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪ ಸೇರಿದಂತೆ ಹಲವು ವಿಧೇಯಕಗಳಿಗೆ ತಿದ್ದುಪಡಿ ತರಲಾಗುವುದು ಎಂದು ಸ್ಪೀಕರ್ ಕೋಳಿವಾಡ್ ತಿಳಿಸಿದ್ದಾರೆ. 
 
ಬಜೆಟ್ ಅಧಿವೇಶನದಲ್ಲಿ ಶಾಸಕರ ಹಾಜರಾತಿ ಕಡ್ಡಾಯವಾಗಿದ್ದು, ಕಲಾಪ ಆರಂಭವಾದ ಒಂದು ಗಂಟೆಯ ನಂತರ ಆಗಮಿಸಿದ ಶಾಸಕರನ್ನು ಗೈರುಹಾಜರು ಎಂದು ಪರಿಗಣಿಸಲಾಗುವುದು ದಿನದಲ್ಲಿ ಎರಡು ಬಾರಿ ಶಾಸಕರ ಸಹಿಯನ್ನು ಪಡೆಯಲಾಗುತ್ತಿದ್ದು, ಶಾಸಕರ ಇರುವಿಕೆ ಅವಧಿಯನ್ನು ಮಾಧ್ಯಮಗಳಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.  
 
ಅಧಿವೇಶನ ಕಲಾಪದಲ್ಲಿ ಪಾಲ್ಗೊಂಡು ಜನತೆಯ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರದೊಂದಿಗೆ ಚರ್ಚಿಸುವುದು ಶಾಸಕರ ಕರ್ತವ್ಯ.ಜನಪ್ರತಿನಿಧಿಗಳೇ ಗೈರುಹಾಜರಾದಲ್ಲಿ ರಾಜ್ಯದ ಜನತೆಯ ಉದ್ಧಾರ ಹೇಗೆ ಸಾಧ್ಯ ಎಂದು ಸ್ಪೀಕರ್ ಕೋಳಿವಾಡ ಪ್ರಶ್ನಿಸಿದ್ದಾರೆ.

ಬಜೆಟ್‌ನಲ್ಲಿ ರೈತರ ಸಾಲ ಮನ್ನವಾಗಲಿದೆಯೇ? ಯಾವ ವಸ್ತುಗಳು ದುಬಾರಿಯಾಗಲಿವೆ, ಯಾವ ವಸ್ತುಗಳು ದರಗಳು ಇಳಿಕೆಯಾಗಲಿವೆ, ಸೇವಾ ತೆರಿಗೆ, ತಂತ್ರಜ್ಞಾನ ಕ್ಷೇತ್ರಗಳ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆಯೇ ಎನ್ನುವುದಕ್ಕೆ ನಾಳೆ ಉತ್ತರ ದೊರೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments