Select Your Language

Notifications

webdunia
webdunia
webdunia
webdunia

ಪಕ್ಷದ ಪದಾಧಿಕಾರಿಗಳ ನೇಮಕ ಪಟ್ಟಿ ನಾಳೆ ಸಿದ್ಧ: ಕುಮಾರಸ್ವಾಮಿ

ಪಕ್ಷದ ಪದಾಧಿಕಾರಿಗಳ ನೇಮಕ ಪಟ್ಟಿ ನಾಳೆ ಸಿದ್ಧ: ಕುಮಾರಸ್ವಾಮಿ
ರಾಮನಗರ , ಸೋಮವಾರ, 2 ಮಾರ್ಚ್ 2015 (19:11 IST)
ಜೆಡಿಎಸ್ ಪಕ್ಷದ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕಿದ್ದು, ನಾಳೆ ಪಕ್ಷದ ಮುಖಂಡ ಬಂಡೆಪ್ಪ ಕಾಶೆಂಪೂರ್ ಅವರ ನಗರದಲ್ಲಿನ ನಿವಾಸದಲ್ಲಿ ಸಭೆ ಕರೆಯಲಾಗಿದ್ದು, ಅರ್ಹರ ಪಟ್ಟಿಯನ್ನು ಅಂತಿಮಗೊಳಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.  
 
ಪಕ್ಷದ ಮುಖಂಡರೊಂದಿಗೆ ನಗರದ ಈಗಲ್ವನ್ ರೆಸಾರ್ಟ್‌ನಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಂಡಿದ್ದು, ನಾಳೆ ಪಕ್ಷದ ಶಾಸಕ ಬಂಡೆಪ್ಪ ಕಾಶೆಂಪೂರ್ ಅವರ ನಿವಾಸದಲ್ಲಿ ಸಭೆ ಕರೆಯಲಾಗಿದೆ. ಆದ್ದರಿಂದ ನಾಳೆ ರಾಜ್ಯದ ಎಲ್ಲಾ ಕಡೆ ಕೂಡ ನೂತನ ಪದಾದಿಕಾರಿಗಳನ್ನು ನೇಮಿಸಲಾಗುವುದು. ಶಾಸಕರ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಿದ್ದು, ಅಂತಿಮವಾಗಿ ಪಕ್ಷದ ಕೋರ್ ಕಮಿಟಿ ಪದಾಧಿಕಾರಿಗಳ ನೇಮಕವನ್ನು ಅಂತಿಮಗೊಳಿಸಲಿದೆ. ಅಲ್ಲದೆ ಪಕ್ಷ ಸಂಘಟನೆಗಾಗಿ ಈ ಕ್ರಮ ಕೈಗೊಳ್ಳುವಂತೆ ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡರು ಸೂಚಿಸಿದ್ದಾರೆ ಎಂದರು. 
 
ಇಂದು ನಗರದಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಿ ಸದಸ್ಯತ್ವ ನೊಂದಣಿ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಸಮಾವೇಶ ಮುಕ್ತಾಯವಾದ ಬಳಿಕ ನಗರದ ಈಗಲ್ವನ್ ರೆಸಾರ್ಟ್‌ನಲ್ಲಿ ಸಭೆ ಕರೆದು ಪಕ್ಷದ ಆಗು ಹೋಗುಗಳ ಬಗ್ಗೆ ಚರ್ಚಿಸಿದ ಬಳಿಕ ಈ ವಿಷಯವನ್ನು ತಿಳಿಸಿದರು.  

Share this Story:

Follow Webdunia kannada