Webdunia - Bharat's app for daily news and videos

Install App

ಯಡಿಯೂರಪ್ಪಗೆ ಭರ್ಜರಿಯಾಗಿ ತಿವಿದ ಉಮೇಶ್ ಕತ್ತಿ - ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಶುರು

Webdunia
ಶುಕ್ರವಾರ, 18 ಅಕ್ಟೋಬರ್ 2019 (20:08 IST)
ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಶಾಸಕ ಕತ್ತಿ ಮತ್ತೆ ಭರ್ಜರಿಯಾಗಿ ತಿವಿದಿದ್ದಾರೆ.

ಯಡಿಯೂರಪ್ಪ, ಪ್ರಧಾನ ಮಂತ್ರಿ ಮೋದಿಯವರು  ಕೃಷ್ಣಾ ಬಗ್ಗೆ ಚಿಂತನೆ ಮಾಡಬೇಕು. ದೇಶದಲ್ಲಿ, ರಾಜ್ಯದಲ್ಲಿ ಒಂದೇ ಸರ್ಕಾರ, ಅದು ಕರ್ನಾಟಕದ ಬಿಜೆಪಿ ಸರ್ಕಾರ. ಹಾಗಾಗಿ ನೀರಾವರಿ ಯೋಜನೆಗಳಿಗೆ ಇವರಿಬ್ಬರೂ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ ಶಾಸಕ ಕತ್ತಿ.

ಇಲ್ಲದೇ ಹೋದಲ್ಲಿ ಉತ್ತರ ಕರ್ನಾಟಕ ಜನರು ದಕ್ಷಿಣ ಕರ್ನಾಟಕಕ್ಕಿಂತ ಮತ್ತೆ 10 ವರ್ಷ ಹಿಂದುಳಿಯಲಿದ್ದಾರೆ.  ಮಹಾದಾಯಿ ಯೋಜನೆ ಜಾರಿಯಾದಲ್ಲಿ ಯೋಜನೆ ವ್ಯಾಪ್ತಿಯ ಪ್ರದೇಶ ನಂದನವನವಾಗಲಿದೆ ಅಂತ ಹುಕ್ಕೇರಿ ಬಿಜೆಪಿ ಶಾಸಕ ಉಮೇಶ ಕತ್ತಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಉಮೇಶ್ ಕತ್ತಿ ಹೇಳಿಕೆ ನೀಡಿದ್ದು, ಚುನಾವಣೆ ಬಂದಾಗ ಮಹಾರಾಷ್ಟ್ರಕ್ಕೆ ನೀರು ಬಿಡುತ್ತೇನೆ ಅನ್ನೋದು ಸರಳ. ಬೇಸಿಗೆಯಲ್ಲಿ ಮಹಾರಾಷ್ಟ್ರ ನಮಗೆ ಒಂದು ಹನಿ ನೀರನ್ನೂ ಬಿಟ್ಟಿಲ್ಲ ಅಂತ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆಗೆ ಕತ್ತಿ ಟಾಂಗ್ ನೀಡಿದ್ದಾರೆ.

ಚುನಾವಣೆ ಬಂದಾಗ ಘೋಷಣೆ ಮಾಡೋದನ್ನು ಬಿಟ್ಟು ಬಿಡಿ. ನಿಜವಾಗಿಯೂ ಜನೋಪಯೋಗಿ ಕೆಲಸ ಮಾಡಿ. ಮಹಾರಾಷ್ಟ್ರಕ್ಕೆ ನೀರು ಕೊಡುವ ಯಡಿಯೂರಪ್ಪ ಹೇಳಿಕೆ ಖಂಡಿಸುವೆ ಎಂದಿದ್ದಾರೆ.

ಮಹಾರಾಷ್ಟ್ರದ 3-4 ಜಿಲ್ಲೆಗಳು, ಕರ್ನಾಟಕದ 13 ಜಿಲ್ಲೆಗಳನ್ನು ಸೇರಿ ಪ್ರತ್ಯೇಕ ರಾಜ್ಯ ಘೋಷಣೆ ಮಾಡಬೇಕು ಅಂತ ಒತ್ತಾಯ ಮಾಡಿದ್ರು.

ಯಡಿಯೂರಪ್ಪರ ಕ್ರಮವೂ ಸರಿಯಲ್ಲ, ಮೋದಿ ಕ್ರಮವೂ ಸರಿಯಲ್ಲ. ಕೊಲ್ಹಾಪುರ, ಸಾಂಗ್ಲಿ, ಸೋಲಾಪೂರ ಸೇರಿದಂತೆ ಮಹಾರಾಷ್ಟ್ರದ ಜಿಲ್ಲೆಗಳು ಹಾಗೂ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ.

ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಇದೆ, ಹಾಗಾಗಿ ಮೂರು ರಾಜ್ಯಗಳ ಸಿಎಂ ಸೇರಿ ಮಹಾದಾಯಿ ಯೋಜನೆ ಜಾರಿಗೊಳಿಸಲು ಒತ್ತಾಯ ಮಾಡಿದ್ರು. ಪ್ರತ್ಯೇಕ ರಾಜ್ಯ ಆದ್ರೆ ನಾನು ಕರ್ನಾಟಕದ ಮುಖ್ಯಮಂತ್ರಿ ಆಗುವೆ.
ಡಿಸಿಎಂ ಆಗುವ ವ್ಯಕ್ತಿತ್ವ ತನ್ನದಲ್ಲ. ಆದ್ರೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗುವೆ ಎಂದಿದ್ದಾರೆ. ಇಲ್ಲದೇ ಹೋದಲ್ಲಿ ಉತ್ತರ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಆಗುವೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ರಾಜ್ಯಕ್ಕೆ ಅನುದಾನ ಬೇಕಿದ್ದರೆ ಸಿಎಂ ಅವರೇ ಪ್ರಧಾನಿ ಜೊತೆ ಮಾತನಾಡಲಿ: ನಿಖಿಲ್ ಕುಮಾರಸ್ವಾಮಿ

Air India AirCrash: ಇನ್ಮುಂದೆ ವಿಮಾನ ಸಂಖ್ಯೆ 171 ಬಳಸದಿರಲು ನಿರ್ಧಾರ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

ಮುಂದಿನ ಸುದ್ದಿ
Show comments