Webdunia - Bharat's app for daily news and videos

Install App

ಚನ್ನಪಟ್ಟಣದಲ್ಲಿ ರಂಗೇರಿದ ಪ್ರಚಾರ

Webdunia
ಸೋಮವಾರ, 30 ಏಪ್ರಿಲ್ 2018 (13:08 IST)
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ರಂಗೇರಿದ ಚುನಾವಣಾ ರಾಜಕಾರಣ. ಅಭ್ಯರ್ಥಿಗಳ ಬೆಂಬಲಿಗರಿಂದ ಸಾಮಾಜಿಕ ಜಾಲತಾಣಗಳಲ್ಲಿ ವಿವಿಧ ರೀತಿಯ ಪೋಸ್ಟ್ಸ್ ವೈರಲ್ ಆಗಿವೆ.‌ 
ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಅಫಿಡವಿಟ್ ಸಲ್ಲಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಮನೆ ವಿಳಾಸದ ವಿಚಾರವಾಗಿ ಫೇಸ್ ಬುಕ್, ವಾಟ್ಸ್ ಆಪ್ ನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. 
 
ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್, ಕಾಂಗ್ರೆಸ್ ಅಭ್ಯರ್ಥಿ ಹೆಚ್.ಎಂ.ರೇವಣ್ಣ ಮನೆ ವಿಳಾಸದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದೆ. 
 
ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಎಂ.ರೇವಣ್ಣ ಬೆಂಗಳೂರಿನ ನಿವಾಸದಲ್ಲಿರುವುದಾಗಿ ಅಫಿಡವಿಟ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ತಾಲ್ಲೂಕಿನ ಚಕ್ಕರೆ ಗ್ರಾಮದ ಮನೆಯಲ್ಲಿರುವುದಾಗಿ ಸ್ಪಷ್ಟನೆ ನೀಡಿದ್ದಾರೆ. 
 
ಇದೇ ವಿಚಾರವನ್ನಿಟ್ಟುಕೊಂಡು ಕಾರ್ಯಕರ್ತರ ನಡುವೆ ಭಾರಿ ಚರ್ಚೆ ನಡೆದಿದೆ. ಹೊರಗಿನವರು,  ಸ್ಥಳಿಯರು ಎಂಬ ಭಾವನೆ ವ್ಯಕ್ತಪಡಿಸುತ್ತಿರುವ ಕಾರ್ಯಕರ್ತರು. ಹೊರಗಿನವರನ್ನ ತಿರಸ್ಕರಿಸಿ, ಸ್ಥಳಿಯರಿಗೆ ಮನ್ನಣೆ ಕೊಡಿ ಎಂದು ಸಂದೇಶ ರವಾನಿಸುತ್ತಿರುವ ಸಿ.ಪಿ.ಯೋಗೇಶ್ವರ್ ಬೆಂಬಲಿಗರಿಂದ ಚರ್ಚೆ ಬಿಸಿಯೇರುತ್ತಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments