Webdunia - Bharat's app for daily news and videos

Install App

ದೇಶದ ಟಾಪ್ ಹ್ಯಾಷ್‌ಟ್ಯಾಗ್‌ನಡಿ ಟ್ರೆಂಡಿಂಗ್

Webdunia
ಸೋಮವಾರ, 25 ಜುಲೈ 2022 (11:39 IST)
ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯಿಸಿ ಭಾನುವಾರ ಸಂಜೆ 5ಕ್ಕೆ ಹಮ್ಮಿಕೊಂಡಿದ್ದ ಟ್ವಿಟ್ಟರ್ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,

ದೇಶದಲ್ಲಿ 35 ಟಾಪ್ ಹ್ಯಾಷ್ಟ್ಯಾಗ್ನಡಿ ಟ್ವಿಟ್ಟರ್ ಟ್ರೆಂಡಿಂಗ್ ಆಗಿದೆ. ದಶಕಗಳಿಂದ ಉತ್ತರಕನ್ನಡ ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಒತ್ತಾಯ ಕೇಳಿಬರುತ್ತಿದೆ.

ಮಲೆನಾಡಿನ ತಾಲೂಕುಗಳ ಜನತೆ ತುರ್ತು ಅಥವಾ ಯಾವುದೇ ಚಿಕಿತ್ಸೆಗಾಗಿ ಹುಬ್ಬಳ್ಳಿ, ಬೆಳಗಾವಿ, ಕರಾವಳಿಯ ನಾಲ್ಕೂ ತಾಲೂಕಿನವರು ಉಡುಪಿ, ಮಂಗಳೂರು, ಕಾರವಾರದವರು ಗೋವಾ ರಾಜ್ಯದ ಆಸ್ಪತ್ರೆಗಳನ್ನು ಅವಲಂಬಿಸಿದ್ದಾರೆ.

ಅತಿಹೆಚ್ಚು ರಸ್ತೆ ಅಪಘಾತಗಳಾಗಿ, ಗಾಯಗೊಂಡವರನ್ನು ಆಸ್ಪತ್ರೆ ಸೇರಿಸುವ ಮುನ್ನವೇ ಅಸುನೀಗುತ್ತಿರುವ ಘಟನೆಗಳೇ ಹೆಚ್ಚು ಇರುತ್ತೆ. 

ಹೀಗಾಗಿ 2019ರಲ್ಲಿ ಮೊದಲ ಬಾರಿಗೆ ಟ್ವಿಟ್ಟರ್ ಅಭಿಯಾನ ಹಮ್ಮಿಕೊಂಡಾಗ ಅಂದಿನ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿ, ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದರೂ ಯಾವುದೇ ಕಾರ್ಯಗಳು ಆಗಿರಲಿಲ್ಲ.

ಈ ನಡುವೆ ಇತ್ತೀಚಿಗೆ ಶಿರೂರು ಟೋಲ್ ಗೇಟಿನಲ್ಲಿ ನಡೆದ ಆಂಬುಲೆನ್ಸ್ ಅಪಘಾತದಲ್ಲಿ ಜಿಲ್ಲೆಯ ನಾಲ್ವರು ದುರ್ಮರಣ ಹೊಂದಿದ್ದರು. ಈ ಪ್ರಕರಣದ ಬಳಿಕ ಮತ್ತೆ ಆಸ್ಪತ್ರೆಗಾಗಿ ಕೂಗು ಹೆಚ್ಚಾಗಿದ್ದು, ಹಂತಹಂತವಾಗಿ ಪ್ರತಿಭಟನೆಗಳನ್ನ ಹಮ್ಮಿಕೊಳ್ಳಲು ವಿವಿಧ ಸಂಘಟನೆಗಳು ಸಜ್ಜಾಗಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ

ಸಾಧನಾ ಸಮಾವೇಶ ನಡೆಸುತ್ತಿರುವ ಸಿದ್ದರಾಮಯ್ಯಗೆ 17 ಪ್ರಶ್ನೆ ಹಾಕಿದ ಆರ್ ಅಶೋಕ್

ನಾಲ್ವಡಿ ಕೃಷ್ಣರಾಜ ಒಡೆಯರ್ ನಂತರ ಮೈಸೂರನ್ನು ಅಭಿವೃದ್ಧಿಸಿದ್ದೆ ಸಿದ್ದರಾಮಯ್ಯ: ಎಚ್ ಸಿ ಮಹದೇವಪ್ಪ

Viral video: ಕಂಪನಿ ಎಚ್ ಆರ್ ಜೊತೆ ಅಫೇರ್: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಸಿಇಒ

ಮುಂದಿನ ಸುದ್ದಿ
Show comments