Webdunia - Bharat's app for daily news and videos

Install App

ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ಟವೆಲ್ ಹಾಕಿಲ್ಲ: ಆರ್. ಅಶೋಕ

Webdunia
ಭಾನುವಾರ, 10 ಅಕ್ಟೋಬರ್ 2021 (13:12 IST)
ಬೆಂಗಳೂರು : 'ಬೆಂಗಳೂರು ಉಸ್ತುವಾರಿ ಸಚಿವ ಸ್ಥಾನಕ್ಕೆ ನಾನು ಟವೆಲ್ ಹಾಕಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ನೀಡಿದ್ದರು. ಸಚಿವ ಎಂ.ಟಿ.ಬಿ. ನಾಗರಾಜ್ ತಮಗೆ ಬಿಟ್ಟು ಕೊಡುವಂತೆ ಕೇಳಿದರು.

ನಾನು ತಕ್ಷಣವೇ ಅವರ ಕೋರಿಕೆಯನ್ನು ಒಪ್ಪಿಕೊಂಡಿದ್ದೆ. ಯಾವುದೇ ಜಿಲ್ಲೆಯ ಉಸ್ತುವಾರಿ ಇಲ್ಲದೆಯೂ ಕೆಲಸ ಮಾಡಿದ್ದೇನೆ' ಎಂದು ಆರ್. ಅಶೋಕ ಹೇಳಿದರು.
'ನಾನು ಯಾವುದೇ ಜಿಲ್ಲೆಯ ಉಸ್ತುವಾರಿ ನೀಡುವಂತೆ ಬೇಡಿಕೆ ಇಟ್ಟಿಲ್ಲ. ರಾಜ್ಯದ 31 ಜಿಲ್ಲೆಗಳಿಗೂ ಉಸ್ತುವಾರಿ ಸಚಿವರನ್ನು ನೇಮಿಸುವುದು ಮುಖ್ಯಮಂತ್ರಿಯವರ ಪರಮಾಧಿಕಾರ. ಅವರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ. ಸೋಮಣ್ಣ ಸರಿಯಾಗಿ ಹೇಳಿದ್ದಾರೆ. ನಮ್ಮ ನಡುವೆ ಯಾವುದೇ ಸಮಸ್ಯೆ ಇಲ್ಲ. ಅವರು ಸಭೆ ಕರೆದ ಹಿಂದಿನ ದಿನ ಅರ್ಧ ಗಂಟೆ ಮಾತನಾಡಿದ್ದೆವು. ಪೂರ್ವನಿಗದಿತ ಕಾರ್ಯಕ್ರಮ ಅಥವಾ ಪ್ರವಾಸದಲ್ಲಿದ್ದರೆ ಸಭೆಗೆ ಹೋಗಲು ಆಗುವುದಿಲ್ಲ. ಉಳಿದಂತೆ ಶಾಸಕರೇ ಸಭೆ ಕರೆದರೂ ನಾನು ಹೋಗುತ್ತೇನೆ' ಎಂದು ಹೇಳಿದರು.
'ನನ್ನ ಇಲಾಖೆಯನ್ನು ಬಿಟ್ಟು ಬೇರೆ ಇಲಾಖೆಗಳ ಕೆಲಸಕ್ಕೆ ನಾನು ತಲೆ ಹಾಕುವುದಿಲ್ಲ. ಬೆಂಗಳೂರಿನಲ್ಲಿ ರಸ್ತೆಗಳ ಗುಂಡಿ ಮುಚ್ಚಿಸಲು ಹೇಳಿದ್ದಾರೆ. ಅದನ್ನಷ್ಟೇ ಮಾಡಿದ್ದೇನೆ' ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments