ಟೋಯಿಂಗ್ ಕಿರಿಕ್ ಶೀಘ್ರ ಸುಧಾರಣೆ -ಸಿಎಂ

Webdunia
ಭಾನುವಾರ, 30 ಜನವರಿ 2022 (14:24 IST)
ಅನಧಿಕೃತ ಸ್ಥಳಗಳಲ್ಲಿ ನಿಲುಗಡೆ ಮಾಡುವ ವಾಹನಗಳನ್ನು ಟೋಯಿಂಗ್‌ ವ್ಯವಸ್ಥೆಯಲ್ಲಿನ ಲೋಪಗಳನ್ನು ಸರಿಪಡಿಸಿ, ಸುಧಾರಣೆ ತರಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
 
ಸುದ್ದಿಗಾರರ ಜತೆ ಭಾನುವಾರ ಮಾತನಾಡಿದ ಅವರು, 'ಹಿಂದೆ ಪೊಲೀಸ್‌ ಇಲಾಖೆಯೇ ಟೋಯಿಂಗ್‌ ಕೆಲಸವನ್ನು ನಿರ್ವಹಿಸುತ್ತಿತ್ತು.
ಖಾಸಗಿಯವರಿಗೆ ಗುತ್ತಿಗೆಗೆ ನೀಡಲಾಗಿದೆ. ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳಿಂದ ಟೋಯಿಂಗ್‌ ವ್ಯವಸ್ಥೆ ಕುರಿತು ಪುನರ್‌ ಪರಿಶೀಲನೆ ಅಗತ್ಯ ಎಂಬ ತೀರ್ಮಾನಕ್ಕೆ ಬರಲಾಗಿದೆ' ಎಂದರು.
ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಅಗತ್ಯ. ಆದರೆ, ಕಾನೂನು ಜಾರಿಯ ಹೆಸರಿನಲ್ಲಿ ಅತಿರೇಕದ ವರ್ತನೆಗಳನ್ನೂ ಸಹಿಸಲಾಗದು. ಜನಸ್ನೇಹಿಯಾದ ವ್ಯವಸ್ಥೆಯನ್ನು ರೂಪಿಸುವ ಕುರಿತು ಯೋಚಿಸಲಾಗುತ್ತಿದೆ ಎಂದು ಹೇಳಿದರು.
 
ಟೋಯಿಂಗ್‌ ವ್ಯವಸ್ಥೆಯ ಸುಧಾರಣೆಗೆ ಸಂಬಂಧಿಸಿದಂತೆ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಾಗುವುದು. ರಾಜ್ಯ ಪೊಲೀಸ್‌ ಮಹಾನಿರ್ದೇಶಕರು, ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌, ಹೆಚ್ಚುವರಿ ಪೊಲೀಸ್‌ ಕಮಿಷನರ್‌ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments