ಅರಣ್ಯ ನಾಶ ಮಾಡಿದ ಸಚಿವ ಈಶ್ವರ ಖಂಡ್ರೆ ಆರೋಪಕ್ಕೆ ಟಾಕ್ಸಿಕ್ ಚಿತ್ರಂತಡದಿಂದ ತಿರುಗೇಟು

Krishnaveni K
ಬುಧವಾರ, 30 ಅಕ್ಟೋಬರ್ 2024 (09:59 IST)
Photo Credit: X
ಬೆಂಗಳೂರು: ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕೆ ಅರಣ್ಯ ಪ್ರದೇಶದಲ್ಲಿ ಮರಗಳನ್ನು ಕಡಿದು ಹಾಕಲಾಗಿದೆ ಎಂಬ ಸಚಿವ ಈಶ್ವರ ಖಂಡ್ರೆ ಆರೋಪಗಳಿಗೆ ಚಿತ್ರತಂಡ ಈಗ ಸ್ಪಷ್ಟನೆ ನೀಡಿದೆ.

ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಟಾಕ್ಸಿಕ್ ಸಿನಿಮಾ ತಂಡ ಹೆಚ್ ಎಂಟಿ ವಶದಲ್ಲಿರುವ ಅರಣ್ಯ ಭೂಮಿಯಲ್ಲಿ ಮರಗಳ ಮಾರಣಹೋಮ ನಡೆಸಿದೆ ಎಂದು ಈಶ್ವರ ಖಂಡ್ರೆ ಟ್ವೀಟ್ ಮಾಡಿದ್ದರು. ಈ ಬಗ್ಗೆ ಸ್ಯಾಟ್ ಲೈಟ್ ಪಿಕ್ಚರ್ ಗಳನ್ನು ಬಿಡುಗಡೆ ಮಾಡಲಾಗಿದೆ. ಕೃತ್ಯವೆಸಗಿದ ಚಿತ್ರತಂಡದ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದ್ದರು.

ಆದರೆ ಈ ಆರೋಪಗಳಿಗೆ ಚಿತ್ರತಂಡವೂ ಸ್ಪಷ್ಟನೆ ನೀಡಿದೆ. ಸೆಟ್ ಹಾಕಲು ಅನುಮತಿ ಕರಾರು ಪತ್ರಕ್ಕೆ ಸಹಿ ಹಾಕುವ ಮುನ್ನ ತೆಗೆದಿದ್ದ ಸ್ಯಾಟ್ ಲೈಟ್ ಚಿತ್ರ ನಮ್ಮ ಬಳಿಯೂ ಇದೆ. 2022 ರ ಸ್ಯಾಟ್ ಲೈಟ್ ಚಿತ್ರದ ಸಾಕ್ಷ್ಯ ನಮ್ಮ ಬಳಿಯಿದೆ. ನಾವು ಯಾವುದೇ ಪರಿಸರ ನಾಶ ಮಾಡಿಲ್ಲ. ಖಾಲಿ ಇದ್ದ ಜಾಗ ಬಳಸಿಕೊಂಡೇ ಚಿತ್ರೀಕರಣ ಮಾಡಿದ್ದೇವೆ. ಸೆಟ್ ನಿರ್ಮಾಣಕ್ಕೆ ಮುನ್ನ ಅಲ್ಲಿನ ಚಿತ್ರವೂ ನಮ್ಮ ಬಳಿಯಿದೆ ಎಂದು ಚಿತ್ರತಂಡ ಸ್ಪಷ್ಟನೆ ನೀಡಿದೆ.

ಟಾಕ್ಸಿಕ್ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ ನಿರ್ಮಾಣ ಸಂಸ್ಥೆ ಬಹುಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದೆ. ಇದು ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾವಾಗಿದೆ. ಮಲಯಾಳಂ ಮೂಲದ ಗೀತು ಮೋಹನ್ ದಾಸ್ ಚಿತ್ರದ ನಿರ್ದೇಶಕಿ. ಡ್ರಗ್ಸ್ ಮಾಫಿಯಾ ಕುರಿತಾದ ಕತೆ ಹೊಂದಿರುವ ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ ಪತ್ತೆ, ಮಕ್ಕಳ ಮೇಲೆ ಪರಿಣಾಮವೇನು ಗೊತ್ತಾ

ದುಬೈ ಏರ್ ಶೋ ದುರಂತ, ತಾಯ್ನಾಡಿಗೆ ಪೈಲೆಟ್ ನಮನ್ಶ್‌ ಸಿಯಾಲ್ ಪಾರ್ಥಿವ ಶರೀರ

ಕರೂರು ಕಾಲ್ತುಳಿತ ಬೆನ್ನಲ್ಲೇ ಪಕ್ಷದ ಮುಖಂಡರ ಸಭೆ ಕರೆದ ನಟ ವಿಜಯ್

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್‌ ನಾಳೆ ಪ್ರಮಾಣ ಸ್ವೀಕಾರ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತಷ್ಟು ಕಳಪೆ ಮಟ್ಟಕ್ಕೆ ಇಳಿದ ವಾಯು ಗುಣಮಟ್ಟ

ಮುಂದಿನ ಸುದ್ದಿ
Show comments