Select Your Language

Notifications

webdunia
webdunia
webdunia
webdunia

ಮಹೀಂದ್ರ ಫೈನಾನ್ಸ್ ರಿಕವರಿ ವೇಳೆ ಗರ್ಭಿಣಿ ಮಹಿಳೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ ಸಿಬ್ಬಂದಿ

ಮಹೀಂದ್ರ ಫೈನಾನ್ಸ್ ರಿಕವರಿ ವೇಳೆ ಗರ್ಭಿಣಿ ಮಹಿಳೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ  ಸಿಬ್ಬಂದಿ
ಬೆಂಗಳೂರು , ಬುಧವಾರ, 21 ಸೆಪ್ಟಂಬರ್ 2022 (16:21 IST)
ಜಾರ್ಖಂಡ್​ನ ಹಜಾರಿಬಾಘ್​ ಜಿಲ್ಲೆಯಲ್ಲಿ ಸೆ.15ರಂದು ನಡೆದಿದೆ. ಲೋನ್​ ಬಾಕಿ ಉಳಿಸಿಕೊಂಡಿದ್ದಕ್ಕೆ ಕುಟುಂಬದ ಟ್ರ್ಯಾಕ್ಟರ್​ ಅನ್ನು ಮುಟ್ಟುಗೋಲು ಹಾಕೊಂಡಿದ್ದರ ವಿರುದ್ಧ 27 ವರ್ಷದ ಗರ್ಭಿಣಿ ಪ್ರತಿಭಟಿಸುವಾಗ ದುರ್ಘಟನೆ ಸಂಭವಿಸಿದೆ.
 
ಟ್ರ್ಯಾಕ್ಟರ್​ ಖರೀದಿಸಲು ಮಹಿಳೆಯ ತಂದೆ ಮಹೀಂದ್ರಾ ಫೈನಾನ್ಸ್​ನಿಂದ 1.3 ಲಕ್ಷ ರೂಪಾಯಿ ಹಣ ಸಾಲ ಪಡೆದಿದ್ದರು. ಆದರೆ, ಅದನ್ನು ಮರುಪಾವತಿಸಲು ಸಾಧ್ಯವಾಗದಿದ್ದಾಗ, ಲೋನ್​ ರಿಕವರಿ ಏಜೆಂಟ್​ ಟ್ರ್ಯಾಕ್ಟರ್​ ಅನ್ನು ಮುಟ್ಟುಗೋಲು ಹಾಕಿಕೊಂಡರು. ಮಹಿಳೆಯ ತಂದೆ ಸಾಕಷ್ಟು ಬೇಡಿಕೊಂಡರು ಬಿಡದೇ ಟ್ರ್ಯಾಕ್ಟರ್​ ಸೀಜ್​ ಮಾಡಿದರು.
 
ಈ ವೇಳೆ ಮಧ್ಯಪ್ರವೇಶಿಸಿದ ರೈತನ ಗರ್ಭಿಣಿ ಮಗಳು ಟ್ರ್ಯಾಕ್ಟರ್​ ಮುಟ್ಟುಗೋಲಿನ ವಿರುದ್ಧ ಸ್ಥಳದಲ್ಲೇ ಪ್ರತಿಭಟನೆ ಆರಂಭಿಸಿದರು. ಆದರೆ, ಈ ಸಂದರ್ಭದಲ್ಲಿ ಆಕೆಯ ಟ್ರ್ಯಾಕ್ಟರ್​ ಹರಿದು ದುರಂತವಾಗಿ ಸಾವಿಗೀಡಾದಳು. ಉದ್ದೇಶಪೂರ್ವಕವಾಗಿಯೇ ಟ್ರ್ಯಾಕ್ಟರ್​ ಹರಿಸಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಬಗ್ಗೆ ಕಂಪನಿ ತಕ್ಷಣವೇ ಹೇಳಿಕೆ ಬಿಡುಗಡೆ ಮಾಡಿದೆ.
 
ಹಜಾರಿಬಾಘ್​ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ. ಮಾನವ ದುರಂತವೊಂದು ಸಂಭವಿಸಿದೆ. ನಾವು ಈ ಘಟನೆಯನ್ನು ಎಲ್ಲಾ ಅಂಶಗಳಿಂದ ತನಿಖೆ ಮಾಡುತ್ತೇವೆ. ತನಿಖೆಯ ಸಮಯದಲ್ಲಿ ನಾವು ಅಧಿಕಾರಿಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಈ ದುಃಖದ ಕ್ಷಣದಲ್ಲಿ ನಾವು ಸಂತ್ರಸ್ತ ಕುಟುಂಬದೊಂದಿಗೆ ನಿಲ್ಲುತ್ತೇವೆ ಎಂದು ಮಹೀಂದ್ರಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನೀಶ್ ಶಾ ಪ್ರಕಟಣೆ ಹೊರಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಚೆರ್ ಆಫ್ ದಿ ಇಯರ್‌ - ವಿಜೇತೆ ಟೀಚೆರ್ ಅರೆಸ್ಟ್