Webdunia - Bharat's app for daily news and videos

Install App

ಮಹೀಂದ್ರ ಫೈನಾನ್ಸ್ ರಿಕವರಿ ವೇಳೆ ಗರ್ಭಿಣಿ ಮಹಿಳೆ ಮೇಲೆ ಟ್ರ್ಯಾಕ್ಟರ್ ಹತ್ತಿಸಿದ ಸಿಬ್ಬಂದಿ

Webdunia
ಬುಧವಾರ, 21 ಸೆಪ್ಟಂಬರ್ 2022 (16:21 IST)
ಜಾರ್ಖಂಡ್​ನ ಹಜಾರಿಬಾಘ್​ ಜಿಲ್ಲೆಯಲ್ಲಿ ಸೆ.15ರಂದು ನಡೆದಿದೆ. ಲೋನ್​ ಬಾಕಿ ಉಳಿಸಿಕೊಂಡಿದ್ದಕ್ಕೆ ಕುಟುಂಬದ ಟ್ರ್ಯಾಕ್ಟರ್​ ಅನ್ನು ಮುಟ್ಟುಗೋಲು ಹಾಕೊಂಡಿದ್ದರ ವಿರುದ್ಧ 27 ವರ್ಷದ ಗರ್ಭಿಣಿ ಪ್ರತಿಭಟಿಸುವಾಗ ದುರ್ಘಟನೆ ಸಂಭವಿಸಿದೆ.
 
ಟ್ರ್ಯಾಕ್ಟರ್​ ಖರೀದಿಸಲು ಮಹಿಳೆಯ ತಂದೆ ಮಹೀಂದ್ರಾ ಫೈನಾನ್ಸ್​ನಿಂದ 1.3 ಲಕ್ಷ ರೂಪಾಯಿ ಹಣ ಸಾಲ ಪಡೆದಿದ್ದರು. ಆದರೆ, ಅದನ್ನು ಮರುಪಾವತಿಸಲು ಸಾಧ್ಯವಾಗದಿದ್ದಾಗ, ಲೋನ್​ ರಿಕವರಿ ಏಜೆಂಟ್​ ಟ್ರ್ಯಾಕ್ಟರ್​ ಅನ್ನು ಮುಟ್ಟುಗೋಲು ಹಾಕಿಕೊಂಡರು. ಮಹಿಳೆಯ ತಂದೆ ಸಾಕಷ್ಟು ಬೇಡಿಕೊಂಡರು ಬಿಡದೇ ಟ್ರ್ಯಾಕ್ಟರ್​ ಸೀಜ್​ ಮಾಡಿದರು.
 
ಈ ವೇಳೆ ಮಧ್ಯಪ್ರವೇಶಿಸಿದ ರೈತನ ಗರ್ಭಿಣಿ ಮಗಳು ಟ್ರ್ಯಾಕ್ಟರ್​ ಮುಟ್ಟುಗೋಲಿನ ವಿರುದ್ಧ ಸ್ಥಳದಲ್ಲೇ ಪ್ರತಿಭಟನೆ ಆರಂಭಿಸಿದರು. ಆದರೆ, ಈ ಸಂದರ್ಭದಲ್ಲಿ ಆಕೆಯ ಟ್ರ್ಯಾಕ್ಟರ್​ ಹರಿದು ದುರಂತವಾಗಿ ಸಾವಿಗೀಡಾದಳು. ಉದ್ದೇಶಪೂರ್ವಕವಾಗಿಯೇ ಟ್ರ್ಯಾಕ್ಟರ್​ ಹರಿಸಿರುವ ಆರೋಪ ಕೇಳಿಬಂದಿದ್ದು, ಈ ಘಟನೆ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಈ ಬಗ್ಗೆ ಕಂಪನಿ ತಕ್ಷಣವೇ ಹೇಳಿಕೆ ಬಿಡುಗಡೆ ಮಾಡಿದೆ.
 
ಹಜಾರಿಬಾಘ್​ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಮತ್ತು ವಿಚಲಿತರಾಗಿದ್ದೇವೆ. ಮಾನವ ದುರಂತವೊಂದು ಸಂಭವಿಸಿದೆ. ನಾವು ಈ ಘಟನೆಯನ್ನು ಎಲ್ಲಾ ಅಂಶಗಳಿಂದ ತನಿಖೆ ಮಾಡುತ್ತೇವೆ. ತನಿಖೆಯ ಸಮಯದಲ್ಲಿ ನಾವು ಅಧಿಕಾರಿಗಳಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡುತ್ತೇವೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ, ಈ ದುಃಖದ ಕ್ಷಣದಲ್ಲಿ ನಾವು ಸಂತ್ರಸ್ತ ಕುಟುಂಬದೊಂದಿಗೆ ನಿಲ್ಲುತ್ತೇವೆ ಎಂದು ಮಹೀಂದ್ರಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನೀಶ್ ಶಾ ಪ್ರಕಟಣೆ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments