Webdunia - Bharat's app for daily news and videos

Install App

ಸಿಟಿಯಲ್ಲಿ ಟ್ರಾಫಿಕ್ ಕಂಟ್ರೋಲ್ ಮಾಡಲು ಹೊಸ ಪ್ಲ್ಯಾನ್..!

Webdunia
ಮಂಗಳವಾರ, 21 ಜೂನ್ 2022 (20:22 IST)
ಟ್ರಾಫಿಕ್ ಅಂದ್ರೆ ಸಿಲಿಕಾನ್ ಸಿಟಿ ಜನರಿಗೆ ದೊಡ್ಡ ತಲೆನೋವಾಗಿದೆ. ಸಂಚಾರಿ ಪೊಲೀಸರು ಸಹ ವಾಹನ ದಟ್ಟಣೆಗೆ ಕಡಿವಾಣ ಹಾಕಲು ಹರಸಾಹಸ ಮಾಡ್ತಿದ್ದಾರೆ. ಆದ್ರೆ ಇದೀಗ  ಸರ್ಕಾರ KRDCL ಮುಖಾಂತರ ಸಿಟಿಯ 20% ಟ್ರಾಫಿಕ್ ಕಂಟ್ರೋಲ್ ಗೆ ನೂತನ ಯೋಜನೆಗೆ ಮುಂದಾಗಿದೆ.ಟ್ರಾಫಿಕ್ ಅಂದ್ರೆ ಸಿಲಿಕಾನ್ ಸಿಟಿ ಜನರಿಗೆ ದೊಡ್ಡ ತಲೆನೋವಾಗಿದೆ. ಸಂಚಾರಿ ಪೊಲೀಸರು ಸಹ ವಾಹನ ದಟ್ಟಣೆಗೆ ಕಡಿವಾಣ ಹಾಕಲು ಹರಸಾಹಸ ಮಾಡ್ತಿದ್ದಾರೆ. ಆದ್ರೆ ಇದೀಗ  ಸರ್ಕಾರ KRDCL ಮುಖಾಂತರ ಸಿಟಿಯ 20% ಟ್ರಾಫಿಕ್ ಕಂಟ್ರೋಲ್ ಗೆ ನೂತನ ಯೋಜನೆಗೆ ಮುಂದಾಗಿದೆ.
ಮೈಸೂರು, ತುಮಕೂರು, ಹಾಸನ, ಆನೇಕಲ್, ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು ಅನಿವಾರ್ಯವಾಗಿ ನಗರ ಪ್ರದೇಶಿಸಬೇಕಿತ್ತು. ಇನ್ಮುಂದೆ ಹೊರಗಿನಿಂದ ಬಂದ ವಾಹನಗಳು ಏರ್‌ಪೋರ್ಟ್‌ಗೆ ಹೋಗಲು ನಗರ ಪ್ರವೇಶಿಸುವ ಅಗತ್ಯವೇ ಇಲ್ಲ. ಹೀಗಾಗಿ ನಗರದೊಳಗೆ ಟ್ರಾಫಿಕ್ ಸಮಸ್ಯೆ ಕಡಿವಾಣ ಹಾಕಬುದಾಗಿದೆ. ರಾಜ್ಯ ಸರ್ಕಾರ  KRDCL ಮೂಲಕ 154 ಕಿ.ಮೀ. ಉದ್ದದ ಸಪೋರ್ಟಿಂಗ್ ರಸ್ತೆಗಳ ನಿರ್ಮಾಣ ಮಾಡ್ತಿದೆ.  KRDCL ಸುಮಾರು 2 ಸಾವಿರ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯ ಆರಂಭವಾಗಿದೆ. ಈ ಹೊಸ ಯೋಜನೆಗೆ ಸುಮಾರು 72 ಸಾವಿರ ಕೋಟಿ ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗಿದೆ. ಕೆಲವೆಡೆ ಕಾಮಗಾರಿ ಕೊನೆಯ ಹಂತ ಕೂಡ ತಲುಪಿದೆ.

ರಸ್ತೆಗಳ ವಿವರ
ಪ್ಯಾಕೇಜ್  - ರಸ್ತೆ ಉದ್ದ - ಮೊತ್ತ - ಎಲ್ಲಿಂದ ಎಲ್ಲಿಗೆ?  
• ಪ್ಯಾಕೇಜ್ 1  -  20.11 -  154.01- ಬೂದಿಗೆ ಕ್ರಾಸ್ ನಿಂದ ಏರ್ಪೋರ್ಟ್
• ಪ್ಯಾಕೇಜ್ 2 (ಎ) -  15.25 - 174.37 - ನೆಲಮಂಗಲದಿಂದ  ಮಧುರೆ 
• ಪ್ಯಾಕೇಜ್ 2 (ಬಿ) - 23.99 - 190.19 - ಮಧುರೆಯಿಂದ (NH 74)ದೇವನಹಳ್ಳಿ ರಸ್ತೆ (NH 7)     
• ಪ್ಯಾಕೇಜ್ -3 (ಎ)   33.20  -151.29 - ಬಿಡದಿಯಿಂದ ಜಿಗಣಿ
• ಪ್ಯಾಕೇಜ್ 3 (ಬಿ) -  22.98  - 154.48  - ಬನ್ನೇರುಘಟ್ಟದಿಂದ ಆನೇಕಲ್ ಬಳಿಯ ಬೆಸ್ತಮಾನಹಳ್ಳಿ   
• ಪ್ಯಾಕೇಜ್ 4  (ಎ) -  39. 28    -  204. - ಬೆಸ್ತಮಾನಹಳ್ಳಿ (SH-35) ಹೊಸಕೋಟೆ.
ವಾಹನ ದಟ್ಟಣೆ ತಪ್ಪಿಸುವ ಉದ್ದೇಶದಿಂದ 1.96 ಕಿ  ಮೀ. ಉದ್ದದ ಎಲಿವೇಟೆಡ್ ಕಾರಿಡಾರ್‌ ಅನ್ನು 182.16 ಕೋಟಿ ವೆಚ್ಚದಲ್ಲಿ ನಿಲ್ದಾಣ ಮಾಡಲಾಗುತ್ತಿದೆ. 2024ರ ಜೂನ್ ವೇಳೆಗೆ ಪೂರ್ಣಗೊಳಿಸಲು ಯೋಜನೆ ರೂಪಿಸಲಾಗಿದ್ದು ಗೊಲ್ಲಹಳ್ಳಿ, ರಾಮಾನು ಕುಂಟೆ, ನಾರಾಯಣಪುರ, ಕಾಡುಗೋಡಿ ಬಳ್ಳಿ ರೈಲ್ವೆ ಮೇಲ್ವೇತುವೆ, ಬಸವನಹಳ್ಳಿ ಬಳಿ ವರ್ತೂರು ಕೋಡಿ ಸೇರಿದಂತೆ ಒಟ್ಟು ಮೂರು  ಅಭಿವೃದ್ಧಿ ಕಾರ್ಯ  ಭರದಿಂದ ಸಾಗ್ತಿದೆ.ಸಿಟಿಯ  ಟ್ರಾಫಿಕ್ ಸಮಸ್ಯೆ ನಿವಾರಿಸಲು ಸರ್ಕಾರ ಸಿದ್ಧವಾಗಿದೆ. ಈ  ಬಹುಕೋಟಿ ಯೋಜನೆ  ಭರದಿಂದ ಸಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಲ್ಯಾಂಡಿಂಗ್ ವೇಳೆ ರನ್‌ ವೇಯಿಂದ ಜಾರಿದ ಏರ್‌ ಇಂಡಿಯಾ ವಿಮಾನ, ದೊಡ್ಡ ಅವಘಡದಿಂದ ಜಸ್ಟ್‌ ಮಿಸ್‌

ತೆರಿಗೆ ಶಾಕ್‌ಗೆ ಬೆಚ್ಚಿದ ವ್ಯಾಪಾರಿಗಳು, ಜುಲೈ 25ರಂದು ಅಂಗಡಿ, ಮುಂಗಟ್ಟು ಬಂದ್‌ಗೆ ನಿರ್ಧಾರ

ಧರ್ಮಸ್ಥಳ ಪ್ರಕರಣದಲ್ಲಿ ಯಾರನ್ನೂ ಗುರಿಯಾಗಿಸದೆ ಎಸ್‌ಐಟಿ ಕಾಲ ಮಿತಿಯಲ್ಲಿ ತನಿಖೆ ಮಾಡಲಿ: ಬಸವರಾಜ ಬೊಮ್ಮಾಯಿ

ತೇಜಸ್ವಿ ಸೂರ್ಯಗೂ ರಿಲೀಫ್ ನೀಡಿದ ಸುಪ್ರೀಂಕೋರ್ಟ್

ಆರೋಗ್ಯದಲ್ಲಿ ಏರುಪೇರು: ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಸ್ಪತ್ರೆಗೆ ದಾಖಲು

ಮುಂದಿನ ಸುದ್ದಿ
Show comments