Select Your Language

Notifications

webdunia
webdunia
webdunia
webdunia

ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗೆ ಗ್ರಾಮಸ್ಥರಿಂದ ತರಾಟೆ

ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗೆ ಗ್ರಾಮಸ್ಥರಿಂದ ತರಾಟೆ
ತುಮಕೂರು , ಶುಕ್ರವಾರ, 7 ಸೆಪ್ಟಂಬರ್ 2018 (14:26 IST)
ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡ ಘಟನೆ ನಡೆದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲ್ಲೂಕು ಹುಳಿಯಾರಿನಲ್ಲಿ ಘಟನೆ ನಡೆದಿದೆ. ಮಂಗಳೂರು-ವೆಲ್ಲೂಪುರಂ ರಸ್ತೆ ಕಾಮಗಾರಿ ವಿಚಾರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಹೆದ್ದಾರಿಗೆ ಭೂಸ್ವಾಧೀನ ಮಾಡಿಕೊಳ್ಳುವ ವಿಚಾರದಲ್ಲಿ ತಾರತಮ್ಯ ಮಾಡಿರುವ ಆರೋಪವನ್ನು ಜನರು ಮಾಡಿದ್ದಾರೆ.
ಪ್ರಭಾವಿಗಳ ಅನುಕೂಲಕ್ಕೆ ತಕ್ಕಂತೆ ರಸ್ತೆ ಪಥ ಬದಲಿಸಿದ್ದಾರೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮೂಲ ನಕ್ಷೆ ಪ್ರಕಾರ ಭೂಸ್ವಾಧೀನ ಮಾಡಿಕೊಂಡು ರಸ್ತೆ ಕಾಮಗಾರಿ‌ ನಡೆಸುವಂತೆ ಒತ್ತಾಯ ಮಾಡಿದ್ದಾರೆ.

ಶಾಸಕರ ಸಮ್ಮುಖದಲ್ಲಿ ಸಭೆ ಕರೆದು‌ ತೀರ್ಮಾನಿಸಲು ಜನರು ಒತ್ತಾಯ ಮಾಡಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ಕಡವೆ ಕೊಂದು ಮಾಂಸ ಮಾರಾಟ ಮಾಡುತ್ತಿದ್ದವರ ಬಂಧನ