Webdunia - Bharat's app for daily news and videos

Install App

ತಾಂತ್ರಿಕ ಸಮಸ್ಯೆಯಿಂದ ಕಡಿಮೆಯಾದ ಮೆಟ್ರೋ ರೈಲುಗಳ ಸಂಚಾರ

geetha
ಮಂಗಳವಾರ, 20 ಫೆಬ್ರವರಿ 2024 (19:38 IST)
ಬೆಂಗಳೂರು-ಬೆಳ್ಳಂಬೆಳ್ಳಗೆ ಬೈಯಪ್ಪನಹಳ್ಳಿ ಮತ್ತು ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಕೆಲಕಾಲ ಪ್ರಯಾಣಿಕರು ಪರದಾಟ ನಡೆಸಿದ್ರು.ನೇರಳೆ ಮಾರ್ಗದ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು,ನಿಧಾನಗತಿಯಲ್ಲಿ ಮೆಟ್ರೋ ಸಾಗಿದೆ ಹೀಗಾಗಿ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿದ್ದು,ಮೆಜೆಸ್ಟಿಕ್, ಎಂ.ಜಿ.ರೋಡ್ ಸೇರಿದಂತೆ ಹಲವು ನಿಲ್ದಾಣಗಳಲ್ಲಿ ಜನ ಕ್ಯೂ ನಿಂತಿದ್ದಾರೆ.ನಗರದ ಹಲವು ಮೆಟ್ರೋ ಸ್ಟೇಷನ್ ಗಳಲ್ಲಿ ಸಮಯಕ್ಕೆ ಸರಿಯಾಗಿ ಟ್ರೈನ್ ಸಿಗದೇ ಆಫೀಸ್ ಗೆ ತೆರಳಲಾಗದೇ  ಪ್ರಯಾಣಿಕರು ಪರದಾಟ ನಡೆಸಿದ್ದಾರೆ.
 
ತಾಂತ್ರಿಕ ದೋಷದಿಂದ ಬೈಯಪ್ಪನಹಳ್ಳಿಯಿಂದ ಗರುಡಾಚಾರ್ಪಾಳ್ಯ ನಡುವೆ ನೇರಳೆ ಮಾರ್ಗದ ರೈಲುಗಳು ನಿಧಾನಗತಿ ಚಾಲಸುತ್ತಿದೆ.ತಾಂತ್ರಿಕ ಸಮಸ್ಯೆಯಿಂದ ರೈಲು ವೇಳಾಪಟ್ಟಿಯಲ್ಲಿ ಅಡಚಣೆ ಉಂಟಾಗಿದ್ದು ಆದಷ್ಟು ಬೇಗ ಸಮಸ್ಯೆ ಪರಿಹರಿಸಲು ತಂಡಗಳು ಕೆಲಸ ಮಾಡುತ್ತಿವೆ.ಅನಾನುಕೂಲತೆಗಾಗಿ ವಿಷಾದಿಸುತ್ತೇವೆ ಎಂದ ಬಿ ಎಂ ಆರ್ ಸಿಎಲ್ ತಿಳಿಸಿದೆ.ಕಾರ್ಯಾಚರಣೆಯ ತಂಡವು ನಮ್ಮ ಪ್ರಯಾಣಿಕರ ಅನಾನುಕೂಲತೆಗಳನ್ನು ಕಡಿಮೆ ಮಾಡಲು ಶಾರ್ಟ್ ಲೂಪ್ ಸೇವೆಗಳನ್ನು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments