Webdunia - Bharat's app for daily news and videos

Install App

ಅಂಗವಿಕಲೆ ಮೇಲೆ ಟ್ರಾಫಿಕ್ ಎಸ್ ಐ ದರ್ಪ

Webdunia
ಭಾನುವಾರ, 30 ಜನವರಿ 2022 (20:00 IST)
ಬೆಂಗಳೂರು : ವಿಕಲಚೇತನ ಮಹಿಳೆಯೋರ್ವರಿಗೆ ಎಎಸ್‌ಐ ಒಬ್ಬರು ನಡು ರಸ್ತೆಯಲ್ಲಿ ಬೂಟು ಕಾಲಲ್ಲಿ ಒದ್ದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ . ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಇದಾಗಿದೆ . ಹಲಸೂರು ಗೇಟ್ ಸಂಚಾರ ಠಾಣೆ ವ್ಯಾಪ್ತಿಯ ಟೋಯಿಂಗ್ ವಾಹನದ ಸಿಬ್ಬಂದಿ ಮೇಲೆ ಮಹಿಳೆ ಕಲ್ಲು ಬೀಸಿದ್ದಾಳೆ . ಅದು ಎಎಸ್‌ಐ ಮುಖಕ್ಕೆ ತಾಗಿದ್ದು , ರಕ್ತ ಹರಿದಿದೆ . ಸಿಟ್ಟಿನಿಂದ ಟೋಯಿಂಗ್ ವಾಹನದಿಂದ ಕೆಳಗೆ ಇಳಿದು ಬಂದ ಎಎಸ್‌ಐ , ಅವಾಚ್ಯ ಶಬ್ದಗಳಿಂದ ನಿಂದಿಸಿ , ಬೂಟು ಕಾಲಿನಲ್ಲಿ ಒದ್ದಿದ್ದಾರೆ . ವೈರಲ್ ವಿಡಿಯೋ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಎಎಸ್ಐ , ವಿಕಲಚೇತನ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ . ಬಳಿಕ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಮಹಿಳೆ ವಿರುದ್ಧ ದೂರು ನೀಡಿದ್ದಾರೆ . ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ ಆರೋಪದಡಿ ಮಹಿಳೆಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ . ಕ್ಷಮಿಸಿ ಎಂದು ಕಿವಿಗೊಡದ ಪೊಲೀಸರು : ವಿಕಲಚೇತನ ಆಗಿರುವುದರಿಂದ ಕ್ಷಮಿಸಿ ಬಿಡಿ ಎಂದು ಸಾರ್ವಜನಿಕರು ಪೊಲೀಸರನ್ನು ಕೇಳಿಕೊಂಡರೂ ಸಹ ಆಕೆಯನ್ನು ಬಿಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ . ಮಹಿಳೆಗೆ ಟೋಯಿಂಗ್ ವಾಹನ ಕಂಡರೆ ಸಿಟ್ಟು : ಮಹಿಳೆಗೆ ಟೋಯಿಂಗ್ ವಾಹನ ಕಂಡರೆ ಅಗಲ್ಲ . ಹೀಗಾಗಿ , ಟೋಯಿಂಗ್ ಮಾಡದಂತೆ ಪ್ರತಿ ನಿತ್ಯವೂ ಟೋಯಿಂಗ್ ವಾಹನದ ಮೇಲೆ ಕಲ್ಲು ಎಸೆಯುತ್ತಿದ್ದಳು . ಆದ್ರೆ ಆಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ . ಮೂರು ದಿನದ ಹಿಂದೆ ಆಕೆ ತೂರಿದ ಕಲ್ಲು ಎಎಸ್‌ಐ ಮುಖಕ್ಕೆ ಬಿದ್ದಿದೆ . ಆ ಸಿಟ್ಟಿನಲ್ಲಿ ಎಎಸ್‌ಐ ಬೂಟು ಕಾಲಿನಲ್ಲಿ ಒದ್ದು , ಆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments