Webdunia - Bharat's app for daily news and videos

Install App

ಅಂಗವಿಕಲೆ ಮೇಲೆ ಟ್ರಾಫಿಕ್ ಎಸ್ ಐ ದರ್ಪ

Webdunia
ಭಾನುವಾರ, 30 ಜನವರಿ 2022 (20:00 IST)
ಬೆಂಗಳೂರು : ವಿಕಲಚೇತನ ಮಹಿಳೆಯೋರ್ವರಿಗೆ ಎಎಸ್‌ಐ ಒಬ್ಬರು ನಡು ರಸ್ತೆಯಲ್ಲಿ ಬೂಟು ಕಾಲಲ್ಲಿ ಒದ್ದು ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ . ಕಳೆದ ಮೂರು ದಿನಗಳ ಹಿಂದೆ ನಡೆದಿರುವ ಘಟನೆಯ ವಿಡಿಯೋ ಇದಾಗಿದೆ . ಹಲಸೂರು ಗೇಟ್ ಸಂಚಾರ ಠಾಣೆ ವ್ಯಾಪ್ತಿಯ ಟೋಯಿಂಗ್ ವಾಹನದ ಸಿಬ್ಬಂದಿ ಮೇಲೆ ಮಹಿಳೆ ಕಲ್ಲು ಬೀಸಿದ್ದಾಳೆ . ಅದು ಎಎಸ್‌ಐ ಮುಖಕ್ಕೆ ತಾಗಿದ್ದು , ರಕ್ತ ಹರಿದಿದೆ . ಸಿಟ್ಟಿನಿಂದ ಟೋಯಿಂಗ್ ವಾಹನದಿಂದ ಕೆಳಗೆ ಇಳಿದು ಬಂದ ಎಎಸ್‌ಐ , ಅವಾಚ್ಯ ಶಬ್ದಗಳಿಂದ ನಿಂದಿಸಿ , ಬೂಟು ಕಾಲಿನಲ್ಲಿ ಒದ್ದಿದ್ದಾರೆ . ವೈರಲ್ ವಿಡಿಯೋ ಸಾರ್ವಜನಿಕವಾಗಿ ಅವಾಚ್ಯ ಶಬ್ದಗಳನ್ನು ಬಳಸಿ ನಿಂದಿಸಿರುವ ಎಎಸ್ಐ , ವಿಕಲಚೇತನ ಮಹಿಳೆ ಮೇಲೆ ಹಲ್ಲೆ ಮಾಡಿದ್ದಾರೆ . ಬಳಿಕ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಗೆ ತೆರಳಿ ಮಹಿಳೆ ವಿರುದ್ಧ ದೂರು ನೀಡಿದ್ದಾರೆ . ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿ ಹಲ್ಲೆ ಮಾಡಿದ ಆರೋಪದಡಿ ಮಹಿಳೆಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದು ಬಂದಿದೆ . ಕ್ಷಮಿಸಿ ಎಂದು ಕಿವಿಗೊಡದ ಪೊಲೀಸರು : ವಿಕಲಚೇತನ ಆಗಿರುವುದರಿಂದ ಕ್ಷಮಿಸಿ ಬಿಡಿ ಎಂದು ಸಾರ್ವಜನಿಕರು ಪೊಲೀಸರನ್ನು ಕೇಳಿಕೊಂಡರೂ ಸಹ ಆಕೆಯನ್ನು ಬಿಟ್ಟಿಲ್ಲ ಎಂದು ಮೂಲಗಳು ತಿಳಿಸಿವೆ . ಮಹಿಳೆಗೆ ಟೋಯಿಂಗ್ ವಾಹನ ಕಂಡರೆ ಸಿಟ್ಟು : ಮಹಿಳೆಗೆ ಟೋಯಿಂಗ್ ವಾಹನ ಕಂಡರೆ ಅಗಲ್ಲ . ಹೀಗಾಗಿ , ಟೋಯಿಂಗ್ ಮಾಡದಂತೆ ಪ್ರತಿ ನಿತ್ಯವೂ ಟೋಯಿಂಗ್ ವಾಹನದ ಮೇಲೆ ಕಲ್ಲು ಎಸೆಯುತ್ತಿದ್ದಳು . ಆದ್ರೆ ಆಕೆಯನ್ನು ಯಾರೂ ಗಂಭೀರವಾಗಿ ಪರಿಗಣಿಸುತ್ತಿರಲಿಲ್ಲ . ಮೂರು ದಿನದ ಹಿಂದೆ ಆಕೆ ತೂರಿದ ಕಲ್ಲು ಎಎಸ್‌ಐ ಮುಖಕ್ಕೆ ಬಿದ್ದಿದೆ . ಆ ಸಿಟ್ಟಿನಲ್ಲಿ ಎಎಸ್‌ಐ ಬೂಟು ಕಾಲಿನಲ್ಲಿ ಒದ್ದು , ಆ ಮಹಿಳೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಹೇಳಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments