Webdunia - Bharat's app for daily news and videos

Install App

ಸರಕಾರಿ ಆ್ಯಂಬುಲೆನ್ಸ್ ನಲ್ಲಿ ಅಕ್ರಮ ಮದ್ಯ ಸಾಗಾಟ

Webdunia
ಮಂಗಳವಾರ, 21 ಏಪ್ರಿಲ್ 2020 (17:57 IST)
ರೋಗಿಗಳ ತುರ್ತು ಸೇವೆಗಾಗಿ ಸರ್ಕಾರ ನೀಡಿರುವ ಆಂಬ್ಯುಲೆನ್ಸ್ ಮೂಲಕವೇ ಮದ್ಯ ಸಾಗಾಟ ಮಾಡುತ್ತಿದ್ದ ಪ್ರಕರಣ ಬಯಲಾಗಿದೆ.

ಚಿತ್ರಹಳ್ಳಿ ಪೊಲೀಸರು ದಾಳಿ ನಡೆಸಿ 69 ಸಾವಿರ ರೂ. ಮೌಲ್ಯದ ಮದ್ಯದ ಪ್ಯಾಕೆಟ್ ಗಳನ್ನು ವಶಪಡಿಸಿಕೊಂಡಿದ್ದಾರೆ. ನಾಲ್ವರನ್ನು ಬಂಧಿಸಿದ್ದಾರೆ.

 ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ ಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆಂಬ್ಯುಲೆನ್ಸ್ ನಲ್ಲಿ ಚಾಲಕ ಸುಹಾನ್ ಹಾಗೂ ಲ್ಯಾಬ್ ಟೆಕ್ನೀಶಿಯನ್ ಸಂತೋಷ್ ಇವರು ಸೇರಿಕೊಂಡು ಚಳ್ಳಕೆರೆ ತಾಲೂಕಿನ ಉಳ್ಳಾರ್ತಿ ಗ್ರಾಮದ ನರಸಿಂಹರಾಜು ಎಂಬ ವ್ಯಕ್ತಿಗೆ ಸೇರಿದ ಬಾರ್ ನಿಂದ ಮದ್ಯ ತುಂಬಿಸಿಕೊಂಡು ಬಂದು ಖಾಸಗಿ ಓಮ್ನಿಗಳಿಗೆ ವರ್ಗಾಯಿಸುತ್ತಿದ್ದರು.

ಆಂಬ್ಯುಲೆನ್ಸ್ ನಿಂದ ಓಮ್ನಿಗೆ ಮದ್ಯದ ಪ್ಯಾಕೆಟ್ ಗಳನ್ನ ಬದಲಾಯಿಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಖಾಸಗಿ ಮಾರುತಿ ಓಮ್ನಿ ಸೇರಿದಂತೆ ಓಮ್ನಿಯಲ್ಲಿದ್ದ ಮತ್ತಿಬ್ಬರು ಆರೋಪಿಗಳಾದ ಜೀವನ್ ಮತ್ತು ಗಿರೀಶ್ ಎಂಬಾತನನ್ನು ಬಂಧಿಸಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments