ವೇದಿಕೆ ಮೇಲೆ ಉರುಳಿದ ಲೈಟಿಂಗ್ ಟ್ರೇಸ್

Webdunia
ಶುಕ್ರವಾರ, 13 ಮೇ 2022 (18:50 IST)
ರಸಮಂಜರಿ ಕಾರ್ಯಕ್ರಮ ನಡೆಯುತ್ತಿರುವಾಗ ನೋಡ ನೋಡುತ್ತಿದ್ದಂತೆ ವೇದಿಕೆ ಮೇಲೆ ಲೈಟಿಂಗ್ ಟ್ರೇಸ್ ಉರುಳಿ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ನಡೆಯಿತು. ವೇದಿಕೆ ಮೇಲಿದ್ದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅದೃಷ್ಟವಶಾತ್ ಅವಘಡದಿಂದ ಪಾರಾಗಿದ್ದಾರೆ.ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದಲ್ಲಿ ಚೂನಮ್ಮ ದೇವಿ ಜಾತ್ರೆಯ ಅಂಗವಾಗಿ ನಿನ್ನೆ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆಗೊಳ್ಳುತ್ತಿದ್ದಾಗಲೇ ವೇದಿಕೆ ಮೇಲೆ ಹಾಕಿದ್ದ ಲೈಟಿಂಗ್ ಟ್ರೇಸ್ ಮುರಿದು ಬಿದ್ದಿದೆ. ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ರಾಜ್ಯಸಭಾ ಸದಸ್ಯ ಕಡಾಡಿ ಅವಘಡದಿಂದ ಪಾರಾಗಿದ್ದಾರೆ.ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, 'ಲೈಟಿಂಗ್ ಅಳವಡಿಸಿದ್ದ ಕಂಬ ವೇದಿಕೆ ಮೇಲೆ ಉರುಳಿ ಆಕಸ್ಮಿಕ ಅವಘಡ ಸಂಭವಿಸಿತು. ಮೂವರಿಗೆ ಗಾಯಗಳಾಗಿದ್ದು, ನಾವೆಲ್ಲರೂ ಬಚಾವ್ ಆಗಿದ್ದೇವೆ.ವಿದ್ಯುತ್ ಅವಘಡ ಕೂಡ ಸಂಭವಿಸುವ ಸಾಧ್ಯತೆ ಇತ್ತು. ದೇವಿಯ ಆಶೀರ್ವಾದದಿಂದ ನಾವೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದೇವೆ' ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments