Webdunia - Bharat's app for daily news and videos

Install App

ಬೆಂಗಳೂರು-ಮಂಗಳೂರು ರೈಲುಗಳಿಗೆ ವಿಶೇಷ ವಿಸ್ಟಾಡೋಮ್‌ ಭೋಗಿಗಳ ಸೇರ್ಪಡೆ

Webdunia
ಶನಿವಾರ, 3 ಜುಲೈ 2021 (14:56 IST)
ಬೆಂಗಳೂರು: ರಾಜ್ಯದಲ್ಲಿ  ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ಗಾಜಿನ ಮೇಲ್ಚಾವಣಿ ಹೊಂದಿರುವ ಬೋಗಿಯ ರೈಲು ಪ್ರಯಾಣದ ಬುಕಿಂಗ್ ಆರಂಭವಾಗಿದೆ. ಯಶವಂತಪುರದಿಂದ ಮಂಗಳೂರು ರೈಲುಗಳಿಗೆ ಆಕರ್ಷಕ ವಿಸ್ಟಾಡೋಮ್‌ ಬೋಗಿಗಳು ಜುಲೈ  7ರಿಂದ ಸೇರ್ಪಡೆಗೊಳ್ಳಲಿದೆ ಎಂದು ಬೆಂಗಳೂರು ವಿಭಾಗದ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
 
ಶನಿವಾರದಿಂದ ಬುಕಿಂಗ್‌ ಆರಂಭವಾಗಲಿದೆ. ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಪ್ರಕೃತಿ ಹಾಗೂ ಕಡಲತೀರದ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್‌ ಕೋಚ್‌ಗಳನ್ನು ಜೋಡಿಸಲಾಗುತ್ತದೆ ಎಂದು ಹೇಳಿದ್ದಾರೆ.
 
ವಾರದಲ್ಲಿ 3 ಬಾರಿ ಸಂಚರಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲು ಸಂಖ್ಯೆ  06211 /06212),  ಯಶವಂತಪುರ- ಮಂಗಳೂರು ಜಂಕ್ಷನ್‌ ವಿಶೇಷ ರೈಲು (ರೈಲು ಸಂಖ್ಯೆ 06575/06576) ವಿಶೇಷ ಭೋಗಿಳು ಸೇರ್ಪಡೆಗೊಳ್ಳಲಿವೆ ಎಂದು ಹೇಳಿದ್ದಾರೆ.
 
ಯಶವಂತಪುರ -ಮಂಗಳೂರು (ರೈಲು ಸಂಖ್ಯೆ  06539) ಹಾಗೂ ಮಂಗಳೂರು ಜಂಕ್ಷನ್‌-ಯಶವಂತಪುರ ಎಕ್ಸ್‌ಪ್ರೆಸ್‌ನಲ್ಲಿ (ರೈಲು ಸಂಖ್ಯೆ  06540 ) ವಿಸ್ಟಾಡೋಮ್‌ ಬೋಗಿಗಳು ಇರಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಪ್ರಯಾಣಿಕರು ಈ ಹಿಂದೆ ಮನವಿ ಮಾಡಿದ್ದರು.
 
ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗಿರುವ ಈ ರೈಲುಮಾರ್ಗದಲ್ಲಿ ಸಂಚರಿಸುವವರಿಗೆ ಶಿರಾಡಿ ಘಾಟ್ ಸೌಂದರ್ಯವನ್ನು ರೈಲಿನೊಳಗೆ ಕುಳಿತು ನೋಡಬಹುದು. ಮಾರ್ಗಮಧ್ಯದಲ್ಲಿ ಕಾಣಸಿಗುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಸವಿಯಬಹುದು. ಮಳೆಗಾಲ ಕೂಡ ಆರಂಭವಾಗಿರುವುದರಿಂದ ಪ್ರಯಾಣ ಪ್ರಯಾಣಿಕರು ದೃಶ್ಯ ಎಂಜಾಯ್ ಮಾಡಬಹುದದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments