ಹಗಲು ಸಂಚರಿಸುವ ಮಂಗಳೂರು-ಬೆಂಗಳೂರು ರೈಲಿಗೆ ಚಾಲನೆ!

Webdunia
ಭಾನುವಾರ, 11 ಜುಲೈ 2021 (14:44 IST)
ಮಂಗಳೂರು ಜಂಕ್ಷನ್ ಮಧ್ಯೆ ಹಗಲು ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು. 
ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಬೆಳಿಗ್ಗೆ ಮಂಗಳೂರು ಹಾಗೂ ಬೆಂಗಳೂರು ರೈಲಿಗೆ ಹಸಿರು ನಿಶಾನೆ ತೋರಿದರು. 
ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿಆರ್ ಎಂ ಕೊಠಾರಿ, ಕಾರ್ಪೋರೆಟ್ ಗಳಾದ ಸುಧೀರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಸ್ಟಾಡೋಮ ಬೋಗಿಯಲ್ಲಿ 44 ಮಂದಿ ಪ್ರಯಾಣಿಸಬಹುದಾಗಿದೆ. ಎರಡು ಬೋಗಿಯಲ್ಲಿ 88 ಮಂದಿ ಪ್ರಯಾಣಿಸಬಹುದಾಗಿದೆ.
ಈ ವಿಶೇಷ ಬೋಗಿಯು ಪಶ್ಚಿಮ ಘಟ್ಟದ ನಡುವೆ ಸಂಚರಿಸುವ ಸಂದರ್ಭ ರೈಲು ಪ್ರಯಾಣಿಕರಿಗೆ ಪ್ರಕೃತಿಯ ರಮಣೀಯ ಸೌಂದರ್ಯವನ್ನು ಕಣ್ತುಂಬಿಸುವ ಅವಕಾಶ ಸಿಗಲಿವೆ.
ಪಶ್ಚಿಮಘಟ್ಟ ಮತ್ತು ಕರಾವಳಿ ಭಾಗದಲ್ಲಿ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯನ್ನು ತೆಗೆದು ತಲಾ ಎರಡು ವಿಸ್ಟಾಡೋಮ್ ಕೋಚ್ಗಳನ್ನು ಜೋಡಿಸಲಾಗಿದೆ. ಬೆಂಗಳೂರು-ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರು ಪ್ರಕೃತಿಯ ಸೊಬಗಿನ ದರ್ಶನವನ್ನು ಪಡೆಯಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀಕೃಷ್ಣ ನಾನ್ ವೆಜ್ ತಿನ್ನುವಂತೆ ಫೋಟೋ ಹಾಕಿದ ಕೇರಳಂ ಹೋಟೆಲ್: ಇದೆಂಥಾ ವಿಕೃತಿ

ಶಾಂತಪುರ ಕ್ರಾಸ್ ಬಳಿ ಬಸ್ ಕಾರು ಭೀಕರ ಅಪಘಾತ: ಮೃತರ ಸಂಖ್ಯೆ 9ಕ್ಕೆ ಏರಿಕೆ

ಆಪರೇಷನ್ ಸಿಂಧೂರದಲ್ಲಿ ಸೈನಿಕರ ಹಿಂದಿನ ಜಾದೂಗಾರ ಮೋದಿ ಎಂದ ರಾಹುಲ್: ಲೋಕಸಭೆಯಲ್ಲಿ ಕೋಲಾಹಲ Video

ಪ್ರಧಾನಿ ಮೋದಿ, ನನಗೆ ಹೆಂಡತಿಯಿಲ್ಲ, ಹಾಗಾಗಿ ಸಮಸ್ಯೆಯಿಲ್ಲ: ರಾಹುಲ್ ಗಾಂಧಿ, Video

4ವರ್ಷದ ಬಾಲಕಿ ಮೇಲೆ ರೇಪ್‌, ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ವಿರುದ್ಧ ಕಠಿಣ ತೀರ್ಪು ಪ್ರಕಟ

ಮುಂದಿನ ಸುದ್ದಿ
Show comments