ರೈಲ್ವೆ-ಕ್ರಾಸಿಂಗ್ ದಾಟುತ್ತಿದ್ದ ಜೆಸಿಬಿಗೆ ರೈಲೊಂದು ಡಿಕ್ಕಿಹೊಡೆದ ಪರಿಣಾಮವಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳೀಪುರ ವಡ್ಡರಹಳ್ಳಿಯಲ್ಲಿ ನಡೆದಿದೆ
ಇಂದು ಮಧ್ಯಾಹ್ನ 1.05 ಗಂಟೆಗೆ ನಗರಕ್ಕೆ ಆಗಮಿಸುತ್ತಿದ್ದ ಜಬಲ್ಪುರ್ದಿಂದ ಯಶ್ವಂತ್ಪುರ್ ಎಕ್ಸ್ಪ್ರೆಸ್ ರೈಲು ರೈಲ್ವೆ ಕ್ರಾಸಿಂಗ್ ದಾಟುತ್ತಿದ್ದ ಜೆಸಿಬಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಜೆಸಿಬಿ ಚಾಲಕ ಪ್ರಕಾಶ್ ಎಂಬಾತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಜೆಸಿಬಿಯ ಕ್ಲೀನರ್ ನವೀನ್ ಎಂಬಾತನಿಗೆ ಗಂಭೀರವಾದ ಗಾಯಗಳಾಗಿದ್ದರಿಂದ ಆತನನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.