Webdunia - Bharat's app for daily news and videos

Install App

1 ಮಗುವಿಗಾಗಿ ಅರ್ಧ ಗಂಟೆ ತಡವಾಗಿ ಹೊರಟ ರೈಲು ...!!!

Webdunia
ಮಂಗಳವಾರ, 26 ಅಕ್ಟೋಬರ್ 2021 (18:38 IST)
ಅನಾರೋಗ್ಯ ಎದುರಿಸುತ್ತಿದ್ದ 5 ವರ್ಷದ ಮಗುವಿಗೆ ನೆರವಾಗುವುದಕ್ಕಾಗಿ ಡುರೊಂಟೋ ಎಕ್ಸ್ ಪ್ರೆಸ್ (ಯಶ್ವಂತಪುರ- ಹೌರಾ) 27 ನಿಮಿಷಗಳಷ್ಟು ತಡವಾಗಿ ಹೊರಟಿದೆ.
 
ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ವ್ಯಕ್ತಿಯೋರ್ವರಿಗಾಗಿ ರೈಲುಗಳನ್ನು ವಿಳಂಬ ಮಾಡುವುದು ಅತಿ ವಿರಳ.ಆದರೆ ಈ ಪ್ರಕರಣದಲ್ಲಿ ರೈಲ್ವೆ ಅಧಿಕಾರಿಗಳ ಮಾನವೀಯ ನೆಲೆಯ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ.
 
ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ನೀಡಿರುವ ಮಾಹಿತಿಯ ಪ್ರಕಾರ, ಎ1 ಕೋಚ್ ನಲ್ಲಿ 5 ವರ್ಷದ ಮಗು ಜಯನಾಬ್ ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆ ಮಗುವಿಗೆ ಆಕ್ಸಿಜನ್ ಸಿಲಿಂಡರ್ ಅಗತ್ಯವಿದ್ದ ಕಾರಣ, ಅದನ್ನು ವ್ಯವಸ್ಥೆ ಮಾಡುವ ಕಾರಣಕ್ಕಾಗಿ ರೈಲು ಹೊರಡುವುದು ವಿಳಂಬವಾಯಿತು" ಎಂದು ಹೇಳಿದ್ದಾರೆ.
 
ರೈಲು ನಂ.02246 ಸಾಮಾನ್ಯವಾಗಿ ಯಶವಂತಪುರದಿಂದ ಬೆಳಿಗ್ಗೆ 11 ಗಂಟೆಗೆ ಹೊರಡುತ್ತದೆ. ಆದರೆ ಆಕ್ಸಿಜನ್ ವ್ಯವಸ್ಥೆ ಮಾಡಬೇಕಿದ್ದರಿಂದ ಬೆಳಿಗ್ಗೆ 11.27 ಕ್ಕೆ ಹೊರಟಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಪ್ರತ್ಯಕ್ಷದರ್ಶಿಯಾಗಿರುವ ಕೇದಾರನಾಥ್ ರೆಡ್ಡಿ (ಕೃಷಿ ರೈಲು, ಕಾರ್ಗೋ ಸಾಗಾಣಿಕೆಯ ಮಾಲಿಕ) ನೀಡಿರುವ ಮಾಹಿತಿಯ ಪ್ರಕಾರ ಆಸ್ಪತ್ರೆಯಿಂದ ಕರೆತರಲಾಗಿದ್ದ ಮಗು ಇದೇ ರೈಲಿನಲ್ಲಿ ಸಂಚರಿಸಬೇಕಿತ್ತು. ಮಗುವಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಸ್ಟ್ರೆಚರ್ ನಲ್ಲಿ ಮಗುವನ್ನು ಕರೆತಂದು ಉಸಿರಾಟ ಸುಗಮಗೊಳ್ಳುವ ಸಾಧನವನ್ನು ಅಳವಡಿಸಲಾಗಿತ್ತು. ಮಗುವಿನ ಉಸಿರಾಟ ಸಹಜ ಸ್ಥಿತಿಗೆ ಬರುವವರೆಗೂ ಕಾದು ನಂತರ ರೈಲು ಹೊರಟಿತು" ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments