1 ಮಗುವಿಗಾಗಿ ಅರ್ಧ ಗಂಟೆ ತಡವಾಗಿ ಹೊರಟ ರೈಲು ...!!!

Webdunia
ಮಂಗಳವಾರ, 26 ಅಕ್ಟೋಬರ್ 2021 (18:38 IST)
ಅನಾರೋಗ್ಯ ಎದುರಿಸುತ್ತಿದ್ದ 5 ವರ್ಷದ ಮಗುವಿಗೆ ನೆರವಾಗುವುದಕ್ಕಾಗಿ ಡುರೊಂಟೋ ಎಕ್ಸ್ ಪ್ರೆಸ್ (ಯಶ್ವಂತಪುರ- ಹೌರಾ) 27 ನಿಮಿಷಗಳಷ್ಟು ತಡವಾಗಿ ಹೊರಟಿದೆ.
 
ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದೆ. ವ್ಯಕ್ತಿಯೋರ್ವರಿಗಾಗಿ ರೈಲುಗಳನ್ನು ವಿಳಂಬ ಮಾಡುವುದು ಅತಿ ವಿರಳ.ಆದರೆ ಈ ಪ್ರಕರಣದಲ್ಲಿ ರೈಲ್ವೆ ಅಧಿಕಾರಿಗಳ ಮಾನವೀಯ ನೆಲೆಯ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗತೊಡಗಿದೆ.
 
ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿ ನೀಡಿರುವ ಮಾಹಿತಿಯ ಪ್ರಕಾರ, ಎ1 ಕೋಚ್ ನಲ್ಲಿ 5 ವರ್ಷದ ಮಗು ಜಯನಾಬ್ ಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಆ ಮಗುವಿಗೆ ಆಕ್ಸಿಜನ್ ಸಿಲಿಂಡರ್ ಅಗತ್ಯವಿದ್ದ ಕಾರಣ, ಅದನ್ನು ವ್ಯವಸ್ಥೆ ಮಾಡುವ ಕಾರಣಕ್ಕಾಗಿ ರೈಲು ಹೊರಡುವುದು ವಿಳಂಬವಾಯಿತು" ಎಂದು ಹೇಳಿದ್ದಾರೆ.
 
ರೈಲು ನಂ.02246 ಸಾಮಾನ್ಯವಾಗಿ ಯಶವಂತಪುರದಿಂದ ಬೆಳಿಗ್ಗೆ 11 ಗಂಟೆಗೆ ಹೊರಡುತ್ತದೆ. ಆದರೆ ಆಕ್ಸಿಜನ್ ವ್ಯವಸ್ಥೆ ಮಾಡಬೇಕಿದ್ದರಿಂದ ಬೆಳಿಗ್ಗೆ 11.27 ಕ್ಕೆ ಹೊರಟಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
 
ಪ್ರತ್ಯಕ್ಷದರ್ಶಿಯಾಗಿರುವ ಕೇದಾರನಾಥ್ ರೆಡ್ಡಿ (ಕೃಷಿ ರೈಲು, ಕಾರ್ಗೋ ಸಾಗಾಣಿಕೆಯ ಮಾಲಿಕ) ನೀಡಿರುವ ಮಾಹಿತಿಯ ಪ್ರಕಾರ ಆಸ್ಪತ್ರೆಯಿಂದ ಕರೆತರಲಾಗಿದ್ದ ಮಗು ಇದೇ ರೈಲಿನಲ್ಲಿ ಸಂಚರಿಸಬೇಕಿತ್ತು. ಮಗುವಿಗೆ ಉಸಿರಾಟದ ಸಮಸ್ಯೆ ಎದುರಾಗಿತ್ತು. ಸ್ಟ್ರೆಚರ್ ನಲ್ಲಿ ಮಗುವನ್ನು ಕರೆತಂದು ಉಸಿರಾಟ ಸುಗಮಗೊಳ್ಳುವ ಸಾಧನವನ್ನು ಅಳವಡಿಸಲಾಗಿತ್ತು. ಮಗುವಿನ ಉಸಿರಾಟ ಸಹಜ ಸ್ಥಿತಿಗೆ ಬರುವವರೆಗೂ ಕಾದು ನಂತರ ರೈಲು ಹೊರಟಿತು" ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಶಕ್ತಿಪ್ರದರ್ಶನದ ಬೆನ್ನಲ್ಲೇ ನನ್ನದು ಕಾಂಗ್ರೆಸ್ ಬಣ ಎಂದ ರಾಮಲಿಂಗಾ ರೆಡ್ಡಿ

Bengaluru Rains: ಬೆಂಗಳೂರಿನಲ್ಲಿ ದಿಡೀರ್ ಭಾರೀ ಮಳೆ

ಕೃಷಿ ಸಚಿವರು ಡೆಲ್ಲಿಗೆ ಬೇರೆ ಕೆಲಸಕ್ಕೆ ಹೋಗಿದ್ದಾರೆ ಬಿಡಯ್ಯಾ: ಮಾಧ್ಯಮಗಳ ಮೇಲೆ ಗರಂ ಆದ ಸಿಎಂ

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

ದೇವೇಗೌಡರ ಮಕ್ಕಳು ನನ್ನ ಸಿಎಂ ಆಗಲು ಬಿಡ್ತಿರಲಿಲ್ಲ ಎಂದಿದ್ದ ಸಿದ್ದರಾಮಯ್ಯಗೆ ಜೆಡಿಎಸ್ ತಿರುಗೇಟು

ಮುಂದಿನ ಸುದ್ದಿ
Show comments