ಕೇಂದ್ರ ಸೇವೆಗಳಿಗೆ ಕನ್ನಡಿಗರ ನೇಮಕಾತಿ ಹೆಚ್ಚಿಸಲು ತರಬೇತಿ: ಅಶ್ವತ್ಥನಾರಾಯಣ

Webdunia
ಗುರುವಾರ, 19 ಜನವರಿ 2023 (20:35 IST)
ಬಿ.ಎ, ಬಿ.ಕಾಂ, ಬಿ.ಎಸ್ಸಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅಂತಿಮ ವರ್ಷದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಉಚಿತ ತರಬೇತಿ/ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಸ್ಪರ್ಧಾ ಅರಿವು' ನಿಯತಕಾಲಿಕೆ ಗುರುವಾರ ಒಡಂಬಡಿಕೆ ಮಾಡಿಕೊಂಡವು. 
 
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಮತ್ತು 'ಸ್ಪರ್ಧಾ ಅರಿವು' ಸಿಇಒ ಸತೀಶ ಗೌಡ ಅವರು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, "ಕೇಂದ್ರ ಸರಕಾರಿ ಸೇವೆಗಳಿಗೆ ನಮ್ಮ ಕರ್ನಾಟಕದಿಂದ ನೇಮಕವಾಗುವವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು" ಎಂದರು.
 
ಸ್ಟ್ಯಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಮೂಲಕ ಸದ್ಯದಲ್ಲೇ 30 ಸಾವಿರ  ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಈ ಹುದ್ದೆಗಳಿಗೆ ಹಾಗೂ ಯುಪಿಎಸ್ಸಿ ನಡೆಸುವ ನೇಮಕಾತಿಗಳಿಗೆ  ನಮ್ಮ ಕರ್ನಾಟಕದವರು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಬೇಕೆಂಬುದು ಈ ಒಡಂಬಡಿಕೆಯ ಉದ್ದೇಶ ಎಂದು ಅವರು ವಿವರಿಸಿದರು.
 
ಬಿಎ, ಬಿಕಾಂ, ಬಿಎಸ್ಸಿ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕೋರ್ಸ್ ಗಳ ಕೊನೆಯ ವರ್ಷದಲ್ಲಿರುವ ವಿದ್ಯಾರ್ಥಿಗಳಿಗೆ ಎಸ್ಎಸ್ ಸಿ ಮೂಲಕ ವಿವಿಧ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ತರಬೇತಿ ಕೊಡಲಾಗುವುದು. ನೋಂದಣಿ ಮಾಡಿಸಿಕೊಳ್ಳುವ ಪ್ರತಿ ಅಭ್ಯರ್ಥಿಯು ಮೊಬೈಲ್ ಮೂಲಕ ಪ್ರತಿ ತಿಂಗಳು ಹೊಸ ಹಾಗೂ ಪರಿಷ್ಕೃತ ಮಾಹಿತಿಗಳಿಂದ ಕೂಡಿದ ನಿಯತಕಾಲಿಕವನ್ನು ಅಧ್ಯಯನ ಮಾಡಬಹುದು. ಕ್ಯುಆರ್ ಕೋಡ್ ಮೂಲಕ ಇದನ್ನು ನೋಡುವ ಅವಕಾಶವನ್ನೂ ಒದಗಿಸಲಾಗುತ್ತದೆ. ತಯಾರಿ ಭಾಗವಾಗಿ ವಾರಕ್ಕೊಮ್ಮೆ ಸ್ಟಡಿ ಪ್ಲಾನ್ ಸಿದ್ದಪಡಿಸುವ ಜೊತೆಗೆ ಪರೀಕ್ಷೆಯನ್ನೂ ನಡೆಸಲಾಗುವುದು.
ಅಲ್ಲದೆ, ಶಿಕ್ಷಕರ ಮೂಲಕ ತರಬೇತಿಗೂ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.
 
ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ. ಉನ್ನತ ಶಿಕ್ಷಣ ಇಲಾಖೆಯಲ್ಲಿ ಹೊಸದಾಗಿ ಐದು ಸಾವಿರ ಕಾಯಂ ಹುದ್ದೆಗಳ ನೇಮಕಾತಿಗೆ ಪ್ರಸ್ತಾವ ಸಲ್ಲಿಸಲಾಗುವುದು. ಇದರ ಜೊತೆಗೆ ಇನ್ನೂ ಅತಿಥಿ ಉಪನ್ಯಾಸಕರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ತಕ್ಕಂತೆ ಸರ್ಕಾರಿ ಕಾಲೇಜುಗಳಲ್ಲಿನ ಪ್ರವೇಶಾತಿ ಸಂಖ್ಯೆಯನ್ನು ಈಗಿರುವ 5 ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಿಸುವ ಗುರಿ ಹೊಂದಬೇಕು ಎಂದು ಹೇಳಿದರು.
 
ಆಯುಕ್ತರಾದ ಪ್ರದೀಪ ಅವರು ಯೋಜನೆ ಬಗ್ಗೆ ವಿವರಿಸಿದರು.ಸ್ಪರ್ಧಾ ಅರಿವು' ನಿರ್ದೇಶಕ ಗಿರೀಶ, ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಕ ಡಾ. ಅಪ್ಪಾಜಿ ಗೌಡ, ತಾಂತ್ರಿಕ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ಶ್ರೀಕಾಂತ್ ಅವರು ಇದ್ದರು. ಕಾಲೇಜು ಶಿಕ್ಷಣ ಇಲಾಖೆ ಹೆಚ್ಚುವರಿ ನಿರ್ದೇಶಕ ಹೆಬ್ಬಾರ್ ವಂದಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments