Webdunia - Bharat's app for daily news and videos

Install App

ವರ್ಗಾವಣೆ ದಂದೆ, ಗ್ಯಾರಂಟಿ ಯೋಜನೆಗಳೇ ಜೆಡಿಎಸ್ ನಾಯಕರ ಸದನದ ಅಸ್ತ್ರ..!

Webdunia
ಭಾನುವಾರ, 2 ಜುಲೈ 2023 (19:14 IST)
ನಾಳೆಯಿಂದ 14 ರವರೆಗೆ ನಡೆಯಲಿರುವ ವಿಧಾನಸಭೆಯ ಅಧಿವೇಶನ ಸಾಕಷ್ಟು ಕುತುಹಲ ಮೂಡಿಸಿದೆ.ಇವತ್ತು ದಳಪತಿಗಳು ಮಾಜಿ ಪ್ರಧಾನಿ ದೇವೇಗೌಡ್ರು ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಜೆಡಿಎಸ್ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದ್ರು. ನಾಳೆಯಿಂದ ಶುರುವಾಗುವ ವಿಧಾನಮಂಡಲ ಅಧಿವೇಶನ, ಪಕ್ಷದ ಬಲವರ್ಧನೆ, ಜಿಲ್ಲಾ ಮತ್ತು ಜಿಲ್ಲಾ ಘಟಕಗಳ ಪುನಾರಚನೆ, ರಾಜ್ಯ ಘಟಕದ ಪುನಾರಚನೆ, ನೂತನ ಕೋರ್ ಕಮಿಟಿ ರಚನೆ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಮಹತ್ವದ ಸಭೆ ನಡೆಸಿದ್ರು ಜೆಡಿಎಸ್ ನಾಯಕರು.

ಸರ್ಕಾರದ ಮೊದಲ ಅಧಿವೇಶನದ ಪ್ರಾರಂಭಕ್ಕೂ ಮೊದಲೇ, ವರ್ಗಾವಣೆಯ ಬಾಂಬ್ ಅನ್ನ ಸಿಡಿಸಿರುವ ಕುಮಾರಸ್ವಾಮಿ ಸರ್ಕಾರಕ್ಕೆ ತಲೆನೋವಾಗುತ್ತಾರಾ ಅನ್ನೋ ಚರ್ಚೆ ಶುರುವಾಗಿದೆ..ನಾಳೆಯಿಂದ ಅಧಿವೇಶನ ಪ್ರಾರಂಭ ಆಗುತ್ತೆ, ಅಧಿವೇಶನದಲ್ಲಿ ನಮ್ಮ ‌ಪಕ್ಷದ ನಿಲುವಿನ ಬಗ್ಗೆ ನಾಯಕರ ಅಭಿಪ್ರಾಯ,ಸಲಹೆ ಪಡೆದು ನಮ್ಮ ಪಕ್ಷದ ನಿಲುವು ಹೇಗಿರಬೇಕು ಅಂತ ತೀರ್ಮಾನ ಮಾಡ್ತೀನಿ.. ಕಡಿಮೆ ಸ್ಥಾನ ಇದ್ದರು‌ ಹೇಗೆ ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು ಅಂತ ಸಭೆಯಲ್ಲಿ ತೀರ್ಮಾನ ಮಾಡ್ತೀವಿ ಅಂತಾ ಮಾಹಿತಿ ನೀಡಿದ್ರು ಮಾಜಿ ಸಿಎಂ ಕುಮಾರಸ್ವಾಮಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments