Publish Date: Sat, 23 Feb 2019 (12:25 IST)
Updated Date: Sat, 23 Feb 2019 (12:26 IST)
ರಾಜ್ಯದ ನಾಲ್ವರು ಐಎಎಸ್ ಅಧಿಕಾರಿಗಳನ್ನು ಸರಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಗೆ ಕಾರ್ಯದರ್ಶಿಯಾಗಿ ವರ್ಗಾವಣೆ ವರ್ಗಾವಣೆ ಮಾಡಲಾಗಿದೆ.
ರೋಹಿಣಿ ಸಿಂಧೂರಿ ಸ್ಥಾನಕ್ಕೆ ಅಕ್ರಂ ಪಾಷಾ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಮೊದಲು ಅಕ್ರಂ ಪಾಷಾ ಅಲ್ಪ ಸಂಖ್ಯಾತ ನಿರ್ದೇಶನಾಲಯದ ನಿರ್ದೇಶಕರಾಗಿದ್ದರು.
ಇನ್ನು ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಂ.ವಿ ವೆಂಕಟೇಶ್ ಅವರನ್ನು ರಾಷ್ಟ್ರೀಯ ತೋಟಗಾರಿಕಾ ಮಿಷನ್ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದ್ದು, ಹಾವೇರಿ ಜಿಲ್ಲಾಧಿಕಾರಿಯಾಗಿ ಕೆಪಿಎಸ್ಸಿ ಪರೀಕ್ಷಾಧಿಕಾರಿಯಾಗಿದ್ದ ಕೃಷ್ಣಾ ಬಾಜಪೇಯಿ ಅವರನ್ನು ನೇಮಿಸಲಾಗಿದೆ.