ಆಟೊ, ಕ್ಯಾಬ್ ಬಳಕೆದಾರರಿಗೆ ಸಾರಿಗೆ ಇಲಾಖೆ ಆ್ಯಪ್

Webdunia
ಭಾನುವಾರ, 6 ಆಗಸ್ಟ್ 2023 (14:40 IST)
ಆಟೊ, ಕ್ಯಾಬ್‌ಗಳ ಚಾಲಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಸಾರಿಗೆ ಇಲಾಖೆ ವತಿಯಿಂದಲೇ ಹೊಸ ಆ್ಯಪ್ ರೂಪಿಸಲು ಸಿದ್ಧತೆ ನಡೆದಿದೆ. ಈ ಬಗ್ಗೆ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಲಾಭ ಮತ್ತು ನಷ್ಟ ಇಲ್ಲದ ಪರಿಕಲ್ಪನೆಯಲ್ಲಿ ಈ ಆ್ಯಪ್ ಅನ್ನು ಪರಿಚಯಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಕೆಲವೇ ತಿಂಗಳಲ್ಲಿ ಹೊಸ ಆ್ಯಪ್‌ನ ಪ್ರಾಥಮಿಕ ಪ್ರಯೋಗಕ್ಕೆ ಚಾಲನೆ ದೊರೆಯಲಿದೆ. ನಂತರ ಇತರ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು. ಹೊಸ ಆ್ಯಪ್‌ನಲ್ಲಿ ದರ ನಿಗದಿಪಡಿಸುವ ಬಗ್ಗೆ ಇನ್ನೂ ಯೋಚಿಸಿಲ್ಲ. ಆ್ಯಪ್ ಆಧಾರಿತ ಸಾರಿಗೆ ಸೇವೆ ನೀಡುತ್ತಿರುವ ಕೆಲವು ಖಾಸಗಿ ಸಂಸ್ಥೆಗಳು ಆಟೊ ಮತ್ತು ಕ್ಯಾಬ್‌ ಚಾಲಕರಿಗೆ ಕಡಿಮೆ ಹಣ ನೀಡಿ ಹೆಚ್ಚಿನ ಲಾಭ ಮಾಡಿಕೊಳ್ಳುತ್ತಿವೆ. ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಈ ಕ್ರಮಕೈಗೊಂಡಿದೆ ಎಂದು ವಿವರಿಸಿದರು. ಸಾರಿಗೆ ಇಲಾಖೆಯ ಆ್ಯಪ್ ಅಧಾರಿತ ಸೇವೆಗೆ ನೋಂದಣಿ ಮಾಡಿಕೊಳ್ಳಬೇಕು. ಓಲಾ, ಉಬರ್‌ಗಿಂತಲೂ ಚಾಲಕರು ಹೆಚ್ಚಿನ ಲಾಭಗಳಿಸಬಹುದು. ಇಲ್ಲಿ ಯಾವುದೇ ಕಿರುಕುಳ ಇರುವುದಿಲ್ಲ. ಸಾರ್ವಜನಿಕರು ಮತ್ತು ಚಾಲಕರ ಹಿತದೃಷ್ಟಿ ಕೇಂದ್ರೀಕರಿಸಿದ ಆ್ಯಪ್ ಇದಾಗಿದೆ' ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments