Webdunia - Bharat's app for daily news and videos

Install App

ಸರಿಯಾದ ಟೈಂಗೆ ಬಸ್ ಇಲ್ಲ ಎಂದ ವಿದ್ಯಾರ್ಥಿಗೆ ಬಿತ್ತು ಗೂಸಾ

Webdunia
ಬುಧವಾರ, 27 ಸೆಪ್ಟಂಬರ್ 2017 (19:59 IST)
ಹುಬ್ಬಳ್ಳಿ: ಬಸ್ ಸರಿಯಾದ ಸಮಯಕ್ಕೆ ಏಕೆ ಬರುತ್ತಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಸಾರಿಗೆ ಇಲಾಖೆ ನಿಯಂತ್ರಕ ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ ಘಟನೆ ಭಾರತ್ ಮಿಲ್ ಸರ್ಕಲ್ ಬಳಿ ನಡೆದಿದೆ.

ರಾಜ್ಯ ಸಾರಿಗೆ ಬಸ್ ಪಾಸ್ ಕೊಟ್ಟು, ಸರಿಯಾದ ಸಮಯಕ್ಕೆ ಬಸ್ ಬಿಡುತಿಲ್ಲ ಎಂದು ವಿದ್ಯಾರ್ಥಿ ಇಲಾಖೆಯ ನಿಯಂತ್ರಕನನ್ನು ಕೇಳಿದ್ದಾನೆ. ಇದರಿಂ‌ದ ಸಿಟ್ಟಾದ ಸಾರಿಗೆ ಬಸ್ ನಿಯಂತ್ರಕ, ವಿದ್ಯಾರ್ಥಿಯನ್ನು ಮನಬಂದಂತೆ ಥಳಿಸಿದ್ದಾನೆ‌.

ವಿದ್ಯಾರ್ಥಿ ಹುಬ್ಬಳ್ಳಿಯಿದ ಮಿಶ್ರಿಕೋಟಿಗೆ ಹೋಗಬೇಕಿತ್ತು. ಆದರೆ ಒಂದು ಗಂಟೆವರೆಗೂ ಬಸ್ ಇಲ್ಲಗದೆ ವಿದ್ಯಾರ್ಥಿ ಬಸ್ ಗಾಗಿ ಪರಿತಪಿಸಿದ್ದಾನೆ. ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿ,  ಗಿರಣಿ ಚಾಳದ ಕಿರಿಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ತಾತ್ಕಾಲಿಕ ಬಸ್ ತಂಗುದಾಣದಲ್ಲಿನ ನಿಯಂತ್ರಣಾ ಸಿಬ್ಬಂದಿಯನ್ನು ಕೇಳಿದ್ದಾನೆ. ಆದರೆ ಇದಕ್ಕೆ ಸರಿಯಾಗಿ ಸ್ಪಂದಿಸದ ಸಾರಿಗೆ ಬಸ್ ನಿಯಂತ್ರಕ, ಬಸ್ ಪಾಸ್ ನೀಡಿದರೆ ಸರಿಯಾದ ವೇಳೆಗೆ ಬಸ್ ಬಿಡಬೇಕು ಎಂಬ ನಿಯಮ ಎಲ್ಲಿದೆ ಎಂದು ವಿದ್ಯಾರ್ಥಿಗೆ ಪ್ರಶ್ನಿಸಿದ್ದಾನೆ. ಬಳಿಕ ನಿಯಂತ್ರಕ ಹಾಗೂ ಇನ್ನೊಬ್ಬ ಸಿಬ್ಬಂದಿ ಸೇರಿ ವಿದ್ಯಾರ್ಥಿಗೆ ರಕ್ತ ಬರುವ ಹಾಗೆ ಹಲ್ಲೆ ಮಾಡಿದ್ದಾರೆ. ಇದೇವೇಳೆ ಸ್ಥಳೀಯರು ಜಗಳ ಬಿಡಿಸಿ ವಿದ್ಯಾರ್ಥಿಗೆ ಸಮಾಧಾನ ಮಾಡಿ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments