Webdunia - Bharat's app for daily news and videos

Install App

ಸಾರಿಗೆ ನೌಕರರ ಮುಷ್ಕರ: ಬೇಜವಾಬ್ದಾರಿ ಹೇಳಿಕೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

Webdunia
ಬುಧವಾರ, 27 ಜುಲೈ 2016 (13:09 IST)
ನಾಳೆಯೂ ಸಾರಿಗೆ ನೌಕರರ ಮುಷ್ಕರ ನಡೆದರೇ ನಾನೇನು ಮಾಡಲಾಗುವುದಿಲ್ಲ ಎಂದು ಸಾರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
 
ಶಾಂತಿ ನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರ ವೇತನವನ್ನು ಶೇ 10ಕ್ಕಿಂತ ಹೆಚ್ಚು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿದ್ದಾರೆ. ಸಾರಿಗೆ ನೌಕರರ ಮನವೊಲಿಸುವ ಯತ್ನಿಸುತ್ತೇವೆ. ಸಾರಿಗೆ ನೌಕರರ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ಅರ್ಥೈಸಿಕೊಳ್ಳಬೇಕು ಎಂದು ತಿಳಿಸಿದರು.
 
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ಸಂಬಂಧಿಸಿದಂತೆ ಸಾರಿಗೆ ನೌಕರರು ಮನಸ್ಸು ಮಾಡಿದರೆ ಅರ್ಧ ಗಂಟೆಯಲ್ಲೇ ಸಮಸ್ಯೆ ಬಗೆಹರಿಯುತ್ತದೆ ಎಂದು ತಿಳಿಸಿದ್ದಾರೆ.
 
ಸಾರಿಗೆ ನೌಕರರ ವೇತನ ಕುರಿತು ಬೇಡಿಕೆ ಮಾತ್ರ ಈಡೇರಿಸಬೇಕಾಗಿದೆ. ಮಿಕ್ಕೆಲ್ಲ ಬೇಡಿಕೆಗಳು ಸಹಜವಾಗಿಯೇ ಈಡೇರಲಿದೆ. ಸಾರಿಗೆ ನೌಕರರ ವೇತನವನ್ನು 10 ಪ್ರತಿಶತ ಹೆಚ್ಚಳ ಮಾಡಿದರೆ ವರ್ಷಕ್ಕೆ 1560 ಕೋಟಿ ಬೇಕಾಗುತ್ತದೆ. ಸಾರಿಗೆ ನೌಕರರ ಬೇಡಿಕೆಯಂತೆ 35 ಪ್ರತಿಶತ ವೇತನ ಹೆಚ್ಚಿಸಿದರೆ 4150 ಕೋಟಿ ಹೊರೆಯಾಗುತ್ತದೆ ಎಂದು ತಿಳಿಸಿದರು.
 
ಸಾರಿಗೆ ನೌಕರರ ಸಂಘಟನೆಗಳು 30 ರಿಂದ 35 ಪ್ರತಿಶತ ವೇತನ ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿವೆ. ಈಗಾಗಲೇ ಸಾರಿಗೆ ಇಲಾಖೆ ಸಾಲದ ಹೊರೆಯಲ್ಲಿದೆ. ಹಂತ ಹಂತವಾಗಿ ಅದು ಕಡಿಮೆಯಾಗುತ್ತಿದೆ. ಸಾರಿಗೆ ನೌಕರರ ಸಂಘಟನೆಗಳೊಂದಿಗಿನ ಚರ್ಚೆ ಇನ್ನೂ ಅಂತಿಮವಾಗಿಲ್ಲ. ಸಾರಿಗೆ ನೌಕರರು ಮನಸ್ಸು ಮಾಡಿದರೆ ಅರ್ಧ ಗಂಟೆಯಲ್ಲೇ ಸಮಸ್ಯೆ ಬಗೆಹರಿಯುತ್ತದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಭಾಗಗಳಿಗೆ ಮಳೆ ನಿರೀಕ್ಷೆಯೇ ಬೇಡ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments