Webdunia - Bharat's app for daily news and videos

Install App

ಸಾರಿಕೆ ನೌಕರರ ವೇತನ ಹೆಚ್ಚಳ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 26 ಜುಲೈ 2016 (11:03 IST)
ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಕೈಗೊಂಡಿರುವ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ಶೇಖಡಾ 10ಕ್ಕಿಂತ ಹೆಚ್ಚು ವೇತನ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರ ವೇತನವನ್ನು ಕ್ಯಾಬಿನೆಟ್‌ನಲ್ಲಿ 8 ಪ್ರತಿಶತ ಹೆಚ್ಚಿಸಲು ನಿರ್ಧರಿಸಲಾಗಿತ್ತು. ಆದರೆ, ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ 10 ಪ್ರತಿಶತ ವೇತನ ಹೆಚ್ಚಿಸಲು ಸರಕಾರ ಬದ್ಧವಾಗಿದೆ ಎಂದು ತಿಳಿಸಿದರು.
 
ಮೊದಲೇ ಸಾರಿಗೆ ಇಲಾಖೆ ನಷ್ಟದಲ್ಲಿದೆ. ಸಾರಿಗೆ ನೌಕರರು ಹೆಚ್ಚು ಹಠ ಮಾಡುವುದು ಒಳ್ಳೆಯದಲ್ಲ.  ರಾಜ್ಯಾದ್ಯಂತ ಮುಷ್ಕರ ಹೂಡುವುದರಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಇದನ್ನು ಅರ್ಥಮಾಡಿಕೊಂಡು ಮುಷ್ಕರವನ್ನು ಕೈಬಿಟ್ಟು, ಸೇವೆಗೆ ಹಾಜರಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments