ಅರಣ್ಯ ಸಂರಕ್ಷಣೆ ಅಧಿಕಾರಿಗಳಿಂದಲೇ ಮರಗಳ ಹನನ

Webdunia
ಭಾನುವಾರ, 16 ಜನವರಿ 2022 (18:53 IST)
ಅರಣ್ಯ ಸಂರಕ್ಷಣೆ ಅಧಿಕಾರಿಗಳೇ ಮರಗಳನ್ನು ಹನನ ಮಾಡಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿಯ ಸಾಮಾಜಿಕ ಅರಣ್ಯ ವಿಭಾಗದ ಉಪಾರಣ್ಯ ಸಂರಕ್ಷಣಾಧಿಕಾರಿಯಾದ ಹೆಚ್.ಪೂರ್ಣಿಮಾ ಎಂಬುವರಿಗೆ ವಾಸಮಾಡಲು ವಸತಿಗೃಹ ನಿರ್ಮಾಣಕ್ಕೆ ಮಡಿಕೇರಿ ಅರಣ್ಯ ಇಲಾಖೆಯಿಂದ ಸೂಚಿಸಲಾಗಿತ್ತು. ಇದಕ್ಕಾಗಿ 20 ವರ್ಷಗಳಿಂದ ದಟ್ಟವಾಗಿ ಬೆಳೆದ ಪೈನೆಸ್, ನಂದಿ, ಹೆಬ್ಬಲಸು ಮರಗಳನ್ನು ಸಾಮಾಜಿಕ ಅರಣ್ಯ ವಿಭಾಗದ ಉಪವಲಯ ಅಧಿಕಾರಿಯಾದ ಮಯೂರ  ಕರ್ವೆಕರ್ ಮುಂದಾಳತ್ವದಲ್ಲಿ ಕೆಡಿಸಿ ತಮಗೆ ಬೇಕಾದ ವಸತಿ ಗೃಹ ನಿರ್ಮಾಣ ಮಾಡಲು ಸ್ಥಳವನ್ನು ಸಿದ್ಧಪಡಿಸಿ ಕೊಂಡಿರುವುದಾಗಿ ವರದಿಯಾಗಿದೆ.
 ನ್ಯಾಷನಲ್ ಸೋಶಿಯಲ್ ಕ್ರೈo ಇನ್ಫಾರ್ಮೇಶನ್ ಬ್ಯೂರೋ ಸ್ಥಳಕ್ಕೆ ದಾಳಿ ಮಾಡಿ ಮಾಹಿತಿ ಕಲೆ ಹಾಕಿದಾಗ ಅಕ್ರಮವಾಗಿ ಮರಗಳನ್ನು ಕಡಿಯುತ್ತಿದ್ದವರನ್ನು ವಿಚಾರಿಸಿದಾಗ ಅಲ್ಲೇ ಇದ್ದ ಅಧಿಕಾರಿ ಕಾಲ್ಕಿತ್ತಿದ್ದಾರೆ ಎನ್ನಲಾಗಿದೆ.
 ಕಾಡು ಬೆಳೆಸಿ,ನಾಡು ಉಳಿಸಿ ಅನ್ನುವವರು ಈ ರೀತಿ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದಲ್ಲದೆ ದರ್ಪ ತೋರಿಸಿ ಕೆಲಸ ಪ್ರಾರಂಭಿಸಿದ್ದಾರೆ.
ಅಷ್ಟೇ ಅಲ್ಲದೆ ಅರಣ್ಯ ಇಲಾಖೆಯ ಕೆಲಸ ಕಾರ್ಯಕ್ಕಾಗಿ ಅರ್ಜಿ ಹಾಕಿದವರ ಅರ್ಜಿಯನ್ನು ತಿರಸ್ಕರಿಸಿದ್ದು ಸ್ವಂತ ಕೆಲಸಕ್ಕಾಗಿ ಮರಗಳನ್ನು ಮಾರಣಹೋಮ ಮಾಡುತ್ತಿದ್ದಾರೆ. ಮೇಲಾಧಿಕಾರಿಗಳು ಸೂಕ್ಷ್ಮವಾಗಿ ಪರಿಗಣಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments