Webdunia - Bharat's app for daily news and videos

Install App

ಚಿಕ್ಕಬಳ್ಳಾಪುರದಲ್ಲಿ ನಡುಗಿದ ಭೂಮಿ: ಎರಡು ಬಾರಿ ಭೂಕಂಪನದ ಅನುಭವ

Webdunia
ಬುಧವಾರ, 22 ಡಿಸೆಂಬರ್ 2021 (20:31 IST)
ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಭೂಮಿ ನಡುಗಿದ ಅನುಭವವಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ಲು, ಭೋಗಪರ್ತಿ ಗ್ರಾಮಗಳ ಸುತ್ತಮುತ್ತ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ 2.9 ಹಾಗೂ 3.3 ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಎಸ್‌ಸಿ) ತಿಳಿಸಿದೆ.
ಎರಡು ಭಾರಿ ಕಂಪಿಸಿದ ಭೂಮಿ
ಜಿಲ್ಲೆಯ ಮಂಡಿಕಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿ, ಬೋಗೇನಹಳ್ಳಿ, ಭೋಗಪರ್ತಿ, ಹೊಸಹಳ್ಳಿ, ದೊಡ್ಡ ಹಳ್ಳಿ ಮುಂತಾದ ಕಡೆ ಎರಡು ಬಾರಿ ಲಘು ಭೂಕಂಪನ ಉಂಟಾಗಿದೆ ಎಂದು ವರದಿಯಾಗಿದೆ. ಭೂಕಂಪನದಿಂದ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಆತಂಕದಲ್ಲಿ ಸಾರ್ವಜನಿಕರು
ಇತ್ತೀಚಿನ ದಿನಗಳಲ್ಲಿ ಒಂದಲ್ಲ ಒಂದು ರೀತಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹಲವು ಭಾರಿ ಭೂಮಿ ಕಂಪಿಸಿದ ಅನುಭವ ಆಗುತ್ತಿದೆ. ಇದಕೆಲ್ಲ ಕಲ್ಲು, ಗಣಿಗಾರಿಕೆ, ಅಥವಾ ಬಾಂಬ್ ಬ್ಲಾಸ್ಟಿಂಗ್ ಮಾಡುವುದು ಸಮಸ್ಯೆ ಆಗಿರಬಹುದೇ ಎಂಬ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಹರದಾಡುತ್ತಿದೆ. ಇನ್ನಾದರೂ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತವಾಗಿ ಪರಿಶೀಲಿಸಿ ಕ್ರಮ ವಹಿಸಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments