Webdunia - Bharat's app for daily news and videos

Install App

ಹಾಲಿ ಸಚಿವರ ಕ್ಷೇತ್ರದಲ್ಲಿ ಮೊದಲ ಬಾರಿಗೆ ತ್ರಿಕೋನ ಪೈಪೋಟಿ

Webdunia
ಮಂಗಳವಾರ, 25 ಏಪ್ರಿಲ್ 2023 (17:17 IST)
ತುಮಕೂರು : ಚಿಕ್ಕನಾಯಕನಹಳ್ಳಿ ಹಾಲಿ ಸಚಿವರೊಬ್ಬರು ಪ್ರತಿನಿಧಿಸುತ್ತಿರುವ ಕ್ಷೇತ್ರ. ಈ ಕ್ಷೇತ್ರದಲ್ಲಿ ಇಲ್ಲಿವರೆಗೆ ಜೆಡಿಎಸ್ ಮತ್ತು ಬಿಜೆಪಿ ನಡುವೆ ಮಾತ್ರ ಫೈಟ್ ನಡೆಯುತ್ತಿತ್ತು. ಆದರೆ ಈ ಚುನಾವಣೆಯಲ್ಲಿ (2023ರ ವಿಧಾನಸಭಾ ಚುನಾವಣೆ) ಇದೇ ಮೊದಲ ಬಾರಿಗೆ ತ್ರಿಕೋನ ಪೈಪೋಟಿ ಏರ್ಪಟ್ಟಿದೆ.

ಬಿಜೆಪಿ ಸರ್ಕಾರದ ಕಾನೂನು ಸಚಿವರಾಗಿರುವ ಜೆ.ಸಿ.ಮಾಧುಸ್ವಾಮಿ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿಯ ಮಾಜಿ ಶಾಸಕ ಕಿರಣ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹೀಗಾಗಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತ್ರಿಕೋನ ಸ್ಪರ್ಧೆ ನಡೆಯಲಿದೆ. 

ಹೇಗಿದೆ ಚುನಾವಣಾ ರಾಜಕೀಯ ಲೆಕ್ಕಾಚಾರ?

ಜೆಡಿಎಸ್ನ ಮಾಜಿ ಶಾಸಕ ಸಿ.ಬಿ.ಸುರೇಶ್ ಬಾಬು ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಕಿರಣ್ ಕುಮಾರ್ ಇಬ್ಬರಿಗೂ ಕ್ಷೇತ್ರದಲ್ಲಿ ಅನುಕಂಪದ ಅಲೆ ಇದೆ.

ಅದೇ ರೀತಿ ಸಚಿವರಾಗಿ ಕ್ಷೇತ್ರದಲ್ಲಿ ನೀರಾವರಿ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸ ಮಾಡಿರುವುದರಿಂದ ಮಾಧುಸ್ವಾಮಿ ಅವರ ಮೇಲೂ ಜನರ ಒಲವಿದೆ. ಲಿಂಗಾಯತ ಸಮುದಾಯದ ಮತ ಸುಮಾರು 38 ಸಾವಿರ ಇದೆ. ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳಿಬ್ಬರೂ ಲಿಂಗಾಯತ ಸಮುದಾಯದವರಾಗಿರುವುದರಿಂದ ಇಬ್ಬರಿಗೂ ಮತ ಹಂಚಿಕೆ ಆಗಬಹುದು.

ಈ ಮತ ವಿಭಜನೆ ಜೆಡಿಎಸ್ ಅಭ್ಯರ್ಥಿ ಸುರೇಶ್ ಬಾಬುಗೆ ಅನುಕೂಲ ಆಗಲಿದೆ ಎಂಬ ಲೆಕ್ಕಾಚಾರ ಇದೆ. ಸುರೇಶ್ ಬಾಬು ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದು, ಆ ಸಮುದಾಯದಿಂದಲೂ ಸುಮಾರು 35 ಸಾವಿರ ಮತಗಳಿವೆ. ಹಾಗಾಗಿ ಹೇಗೆ ಲೆಕ್ಕಾಚಾರ ಹಾಕಿದರೂ ಜೆಡಿಎಸ್ಗೆ ಲಾಭ ಆಗಬಹುದು ಎನ್ನಲಾಗಿದೆ.

ಜೊತೆಗೆ ಸಚಿವ ಮಾಧುಸ್ವಾಮಿ ವಿರುದ್ಧ ತೊಡೆತಟ್ಟಿ ಬಿಜೆಪಿಯಿಂದ ಬಂಡಾಯ ಎದ್ದು ಕಾಂಗ್ರೆಸ್ ಸೇರಿದ ಕಿರಣ್ ಕುಮಾರ್ ತಮ್ಮ ಗೆಲುವಿಗಿಂತ ಮಾಧುಸ್ವಾಮಿ ಸೋಲನ್ನು ಹೆಚ್ಚು ಬಯಸಿದ್ದಾರೆ. ಹಾಗಾಗಿ ಈ ಇಬ್ಬರ ನಡುವಿನ ಜಗಳ ಮಾಧುಸ್ವಾಮಿಗೆ ಮುಳುವಾಗಿ ಮೂರನೇ ವ್ಯಕ್ತಿ ಜೆಡಿಎಸ್ ಸುರೇಶ್ ಬಾಬುಗೆ ವರವಾಗಬಹುದು ಎಂಬ ವಿಶ್ಲೇಷಣೆಯೂ ನಡೆದಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದಿನ ಸುದ್ದಿ
Show comments