Webdunia - Bharat's app for daily news and videos

Install App

ಅರಮನೆಯಲ್ಲಿ ಗರ್ಭವತಿ ತ್ರಿಷಿಕಾ ದೇವಿ ಒಡೆಯರ್ ಸೀಮಂತ ಶಾಸ್ತ್ರ

Webdunia
ಶುಕ್ರವಾರ, 29 ಸೆಪ್ಟಂಬರ್ 2017 (23:01 IST)
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಮುಗಿಯುತ್ತಿದ್ದಂತೆ ಅರಮನೆ ಮತ್ತೊಂದು ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ವಿಜಯದಶಮಿ ಮುಗಿದ ಮರುದಿನವೇ ತ್ರಿಷಿಕಾ ದೇವಿ ಒಡೆಯರ್ ಸೀಮಂತ ಶಾಸ್ತ್ರ ನಡೆಯಲಿದೆ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪತ್ನಿ ತ್ರಿಷಿಕಾ ಒಡೆಯರ್ ಸದ್ಯ ಗರ್ಭವತಿ. ಹೀಗಾಗಿ ಬೆಂಗಳೂರಿನ ಅರಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ದಸರಾ ಅಂಗವಾಗಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲು ಇತ್ತೀಚೆಗಷ್ಟೆ ಮೈಸೂರಿಗೆ ಆಗಮಿಸಿದ್ದರು. ನಾಳೆ ವಿಜೃಂಭಣೆಯ ದಸರಾ ಮಹೋತ್ಸವಕ್ಕೆ ತೆರೆಬೀಳಲಿದ್ದು, ಮಾರನೆ ದಿನ ಅಂದರೆ ಅ. 1ರಂದು ಅರಮನೆಯಲ್ಲಿ ತ್ರಿಷಿಕಾ ದೇವಿ ಒಡೆಯರ್ ಸಿಮಂತ ಕಾರ್ಯ ನಡೆಯಲಿದೆ.

ರಾಜವಂಶಸ್ಥರು ಹಾಗೂ ಸಂಬಂಧಿಕರಿಗೆ ಈಗಾಗಲೇ ಆಹ್ವಾನ ನೀಡಲಾಗಿದೆ. ಪ್ರಮೋದಾ ದೇವಿ ಒಡೆಯರ್ ಸೇರಿದಂತೆ ತ್ರಿಷಿಕಾ ದೇವಿಯವರ ಕುಟುಂಬ ಸದಸ್ಯರು, ಗಣ್ಯರು ಸೀಮಂತ ಶಾಸ್ತ್ರದಲ್ಲಿ ಭಾಗಿಯಾಗಲಿದ್ದಾರೆ ಎಂದು ರಾಜಮನೆತನ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments