Select Your Language

Notifications

webdunia
webdunia
webdunia
webdunia

ಮೌನಕ್ಕೆ ಶರಣಾಗಿದ್ದಕ್ಕೆ ಟ್ರೋಲ್‌, ಕೊನೆಗೂ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್‌

MLA Pradeep Eshwar
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ದಿನದಂದು ಕಾರಿನಲ್ಲಿ ಮೌನವಾಗಿ ಕುಳಿತಿದ್ದ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಬೆನ್ನಲ್ಲೇ ಇದಕ್ಕೆ ಶಾಸಕ ಪ್ರದೀಪ್ ಈಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರೊಬ್ಬರು ಅಧಿಕಾರದಿಂದ ಕೆಳಗಿಳಿಯುತ್ತಿದ್ದರೆ, ಹೊಸ ನಾಯಕರು ಜವಾಬ್ದಾರಿ ವಹಿಸಿಕೊಳ್ಳುವಂತಹ ಭಾವನಾತ್ಮಕ ಸಂದರ್ಭ ಅದಾಗಿತ್ತು. ಆ ಸಮಯದಲ್ಲಿ ಏನು ಮಾತನಾಡಬೇಕೆಂದು ತಿಳಿದಿರಲಿಲ್ಲ. ಆ ಸಂದರ್ಭದಲ್ಲಿ ನಾನು ಏನ್ ಹೇಳಿಕೆ ನೀಡಿದ್ದರೂ ಅದನ್ನು ತಪ್ಪಾಗಿ ಅರ್ಥೈಸಿಕೊಳ್ಳುವ ಸಾಧ್ಯತೆಯಿತ್ತು. ಈ ಸಂಬಂಧನೇ ನಾನು ಮೌನಕ್ಕೆ ಜಾರಿದ್ದೆ ಎಂದು ಹೇಳಿದರು. 

ಟ್ರೋಲ್‌ಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರದೀಪ್ ಈಶ್ವರ್, ಟ್ರೋಲ್‌ಗಳು ನನಗೆ ಹೊಸದಲ್ಲ. ಕರ್ನಾಟಕದ ಟ್ರೋಲ್ ಪೇಜ್‌ಗಳ ಕ್ರಶ್ ನಾನಾಗಿದ್ದೇನೆ ಎಂದು ತಿಳಿಸಿದರು.

ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನನಗೆ ಸಚಿವ ಸ್ಥಾನ ಪಡೆಯುವ ಆಸೆ ಇದೆ. ಆದರೆ ಕೊಟ್ಟರೂ, ಕೊಡದಿದ್ದರೂ ಪರವಾಗಿಲ್ಲ. ನಾವು ಅಧಿಕಾರಕ್ಕಾಗಿ ರಾಜಕೀಯಕ್ಕೆ ಬಂದಿಲ್ಲ, ಪಕ್ಷದ ಸಿದ್ಧಾಂತ ಮತ್ತು ಜನಸೇವೆ ಮಾಡುವ ಉದ್ದೇಶದಿಂದ ಬಂದಿದ್ದೇವೆ ಎಂದು ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಜಾತಿ ಧರ್ಮ ಯಾವುದಕ್ಕೂ ಮಣಿಯಬೇಡಿ: ಡಿಕೆ ಶಿವಕುಮಾರ್ ಆದೇಶಕ್ಕೆ ಪೊಲೀಸರು ತಲೆಬಾಗಲೇಬೇಕು