ಅಸಮಾಧಾನ ಇರೋದು ನಿಜ. ಹಾಗಂತ ಪಕ್ಷ ಬಿಡಲ್ಲ- ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್

Webdunia
ಬುಧವಾರ, 16 ಜನವರಿ 2019 (11:03 IST)
ಬೆಂಗಳೂರು : ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್ ಅವರನ್ನು ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಡಾ.ಅಜಯ್ ಸಿಂಗ್ ‘ನನಗೆ ಅಸಮಾಧಾನ ಇರೋದು ನಿಜ. ಆದರೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಡಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಕುಟುಂಬದವರ ಜೊತೆ ಪ್ರವಾಸಕ್ಕೆ ಹೋಗಿದ್ದೆ. ಹೀಗಾಗಿ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಇಂದು ವೇಣುಗೋಪಾಲ್ ರನ್ನು ಭೇಟಿ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

 

‘ಮಂತ್ರಿ ಮಾಡಲಿ ಬಿಡಲಿ ಆದ್ರೆ ಪಕ್ಷ ಮಾತ್ರ ತೊರೆಯಲ್ಲ. 1977ರಲ್ಲಿ ಕಾಂಗ್ರೆಸ್ ಇಬ್ಭಾಗವಾದಾಗ ತಮ್ಮ ತಂದೆ ಪಕ್ಷ ಬಿಟ್ಟಿಲ್ಲ. 7 ಜನ ಶಾಸಕರಿದ್ದರೂ ಕೂಡ ಕಾಂಗ್ರೆಸ್ ಕಟ್ಟಿದ್ದಾರೆ. ನಮ್ಮ ತಂದೆಯಿಂದ ಹಿಡಿದು ನಾವು ಕಾಂಗ್ರೆಸ್ ಕಟ್ಟಿದ್ದೇವೆ. ನಮ್ಮನ್ನು ಕಡೆಗಣಿಸಿರೋದು ನಿಜ. ಹಾಗಂತ ಪಕ್ಷ ಬಿಡಲ್ಲ’ ಎಂದು ಅವರು ತಿಳಿಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಏಕಾಏಕಿ ಅನಾರೋಗ್ಯ: ನಿಜವಾಗಿ ಆಗಿದ್ದೇನು ಇಲ್ಲಿದೆ ವಿವರ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಮುಂದಿನ ಸುದ್ದಿ
Show comments