Webdunia - Bharat's app for daily news and videos

Install App

ತನಿಖೆ ಬಳಿಕ ಸತ್ಯ ತಿಳಿಯಲಿದೆ

Webdunia
ಶುಕ್ರವಾರ, 14 ಜುಲೈ 2023 (20:32 IST)
ಚಾಮರಾಜನಗರಕ್ಕೆ ದಕ್ಷಿಣ ವಲಯ DIG ಬೋರಲಿಂಗಯ್ಯ ಭೇಟಿ ನೀಡಿ ಪೊಲೀಸರೊಂದಿಗೆ ಸಭೆ ನಡೆಸಿದ್ದಾರೆ.. ಯಾವುದೇ ಪ್ರಕರಣಗಳನ್ನು ನಿರ್ಲಕ್ಷಿಸದಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ಇನ್ನು ಟಿ.ನರಸೀಪುರ ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಕೊಲೆ ಪ್ರಕರಣ ವಿಚಾರವಾಗಿ DIG ಬೋರಲಿಂಗಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ನಮ್ಮ ಹಿರಿಯ ಅಧಿಕಾರಿಗಳು ಈಗಾಗಲೇ ಮಾತಾಡಿದ್ದಾರೆ. ಘಟನೆ ತಡೆಯೋ ವಿಚಾರವಾಗಿ ಪೊಲೀಸರಿಂದ ಸಣ್ಣಪುಟ್ಟ ತಪ್ಪಾಗಿದ್ದು, ಅವಘಡ ತಡೆಯುವಲ್ಲಿ ವಿಫಲರಾಗಿದ್ದೇವೆ ಎಂದಿದ್ದಾರೆ. ಘಟನೆ ಬಳಿಕ ಆರೋಪಿಗಳ ಬಂಧಿಸಲಾಗಿದೆ. ಪ್ರಕರಣವನ್ನ ಲಾಜಿಕಲ್ ಎಂಡ್​​ಗೆ ತೆಗೆದುಕೊಂಡು ಹೋಗಲಾಗುವುದು. ಜೊತೆಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಏನು ಮಾಡಬೇಕೋ ಅದನ್ನ ಮಾಡಿದ್ದೇವೆ ಎಂದರು. ಇನ್ನು ಪುನೀತ್ ಫೋಟೋ ತೆರವುಗೊಳಿಸಿದ್ದೆ ಕೊಲೆಗೆ ಕಾರಣವಾಯ್ತಾ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಫೋಟೋ ವಿಚಾರ, ಬೈಕ್ ಬಿಡಲಿಲ್ಲ ಎಂಬ ವಿಚಾರಗಳ ಬಗ್ಗೆ ಮಾಹಿತಿ ಬರ್ತಾ ಇದೆ. ಹಳೆ ವೈಷಮ್ಯವೂ ಇರಬಹುದು, ತನಿಖೆ ಸಂಪೂರ್ಣ ಆದ ಬಳಿಕ ಎಲ್ಲ ವಿವರ ತಿಳಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments