ಶ್ರೀಕೃಷ್ಣನ ಮೇಲೆಯೇ ಆರೋಪ ಬಂದಿರುವಾಗ ನಾನ್ಯಾವ ಲೆಕ್ಕ: ಸಿಎಂ ಇಬ್ರಾಹಿಂ

Webdunia
ಶುಕ್ರವಾರ, 6 ಜನವರಿ 2017 (15:26 IST)
ಸ್ವಂತ ಮಗಳ ಭ್ರೂಣ ಹತ್ಯೆ ಮಾಡಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಸಂಪೂರ್ಣ ಘಟನೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. 
 
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ದರು ಅವರಿಗೆ ಕಠಿಣ ಶಿಕ್ಷೆಯಾಗಬೇಕು. ಪ್ರಕರಣದ ಆರೋಪಿಗಳು ಜನತಾ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಬಹುದು. ಆದರೆ, ದೇವರ ನ್ಯಾಯಾಲಯದಿಂದ ತಪ್ಪಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
 
ಪುತ್ರಿ ನನ್ನ ವಿರುದ್ಧ ಆರೋಪ ಮಾಡಿದ್ದಾಳೆ. ಸ್ವಂತ ಶ್ರೀಕೃಷ್ಣನ ಮೇಲೆಯೇ ಆರೋಪ ಕೇಳಿ ಬಂದಿರಲಿಲ್ಲವೇ. ಆರೋಪ ಪ್ರತ್ಯಾರೋಪಗಳೆಲ್ಲ ಸಹಜ ಎಂದು ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ.ಇಬ್ರಾಹಿಂ ಪ್ರತಿಕ್ರಿಯಿಸಿದ್ದಾರೆ. 
 
ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ ಇಬ್ರಾಹಿಂ ಕುಟುಂಬದ ಮೇಲೆ ಸ್ವಂತ ಪುತ್ರಿಯೇ ಭ್ರೂಣ ಹತ್ಯೆಗೈದ ಆರೋಪ ಮಾಡಿದ್ದಾಳೆ. 
 
ಇಬ್ರಾಹಿಂ ಪುತ್ರಿ ಇಫಾ ಮತ್ತು ಅವರ ತಮ್ಮನ ಪುತ್ರ ಸಿ.ಎಂ. ಫೈಸಲ್ 7 ತಿಂಗಳ ಹಿಂದೆ  ಪ್ರೀತಿಸಿ ಮದುವೆಯಾಗಿದ್ದರು. 
 
ಈ ಮದುವೆಗೆ ಇಬ್ರಾಹಿಂ ಕುಟುಂಬ ತೀವ್ರ ವಿರೋಧ ವ್ಯಕ್ತ ಪಡಿಸಿತ್ತು. ಇಫಾ ಈಗ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದು, ನಿನ್ನನ್ನು ನೋಡಬೇಕು ಅನ್ನಿಸುತ್ತದೆ ಎಂದು ಹೇಳಿ ಖಾದರ್ ಪತ್ನಿ ಕಳೆದ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಆಕೆಯನ್ನು ಮನೆಗೆ ಕರೆಸಿಕೊಂಡಿದ್ದರು. ಮೊನ್ನೆ ಆಕೆಯ ಪತಿ ತವರುಮನೆಗೆ ಬಿಡಲು ಬಂದಾಗ ಆತನ ಮೇಲೆ ಹಲ್ಲೆ ಕೂಡ ನಡೆದಿತ್ತು.
 
ಮಂಗಳವಾರ ಮುಂಜಾನೆ ಇಫಾಗೆ ಆಕೆಯ ತಾಯಿ ಹಣ್ಣಿನ ಜ್ಯೂಸ್ ನೀಡಿದ್ದರು. ಬಳಿಕ ಆಕೆಗೆ ಹೊಟ್ಟೆ ನೋವು ಕಂಡುಬಂದಿತ್ತು. ಆಕೆ ಪತಿಗೆ ಫೋನ್ ಕರೆ ಮಾಡಿ ತಕ್ಷಣ ಬರುವಂತೆ ಹೇಳಿದ್ದಾಳೆ. ಆತ ಮೈಸೂರಿನಿಂದ ಬೆಂಗಳೂರಿಗೆ ಬರುವಷ್ಟರಲ್ಲಿ ಆಕೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಹಣ ನೀಡಿ ಗರ್ಭಪಾತ ಮಾಡಿಸಿದ್ದಾರೆ ಎಂದು ಇಬ್ರಾಹಿಂ ಸೋದರ ಖಾದರ್ ಆರೋಪಿಸಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲು ಬರ್ತಿದೆ ಹೋಗಬೇಡ ಎಂದು ತಡೆದ ಹಸು: ಸೈಕಲ್ ಸವಾರನ ಪ್ರಾಣ ಉಳಿಯಿತು video

ಸಿಎಂ ಆಗುವುದಕ್ಕಿಂತಲೂ ಡಿಕೆ ಶಿವಕುಮಾರ್ ಗೆ ಎದುರಾಗಿದೆ ದೊಡ್ಡ ತಲೆನೋವು

Bengaluru: ನಾನು ವಿಐಪಿ ಅಲ್ಲ, ತೆರಿಗೆದಾರ ನನ್ನ ಪತ್ನಿ ಗರ್ಭಿಣಿ, ವಿಐಪಿಗಳಿಗಾಗಿ ರಸ್ತೆ ಯಾಕೆ ಬಂದ್ ಮಾಡಿದ್ದೀರಿ: ವ್ಯಕ್ತಿಯ ಆಕ್ರೋಶ Video

ಹಿಮಾಚಲ ಪ್ರದೇಶದಲ್ಲಿ ಬೆಂಗಳೂರಿನ 7 ಜನರ ಸಾವು

ತಾಯಿ ಕಳೆದುಕೊಂಡಿದ್ದ 9 ನೇ ತರಗತಿ ವಿದ್ಯಾರ್ಥಿನಿ ತಮ್ಮನನ್ನು ಕಂಕುಳಲ್ಲಿ ಹಿಡಿದು ಕ್ಲಾಸ್ ಗೆ ಬಂದಳು: ಕರುಳು ಹಿಂಡುವ ದೃಶ್ಯ video

ಮುಂದಿನ ಸುದ್ದಿ
Show comments