ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ವೃದ್ಧನಿಗೆ ಹಿಗ್ಗಾಮುಗ್ಗಾ ಥಳಿತ

Webdunia
ಗುರುವಾರ, 22 ನವೆಂಬರ್ 2018 (15:20 IST)
70 ರ ವೃದ್ಧನೊಬ್ಬ 9 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊನೆಗೆ ಗ್ರಾಮಸ್ಥರಿಂದ ಹಿಗ್ಗಾ ಮುಗ್ಗಾ ಗೂಸಾ ತಿಂದ ಘಟನೆ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲ್ಲಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಂಕೇನಹಳ್ಳಿ ನಿವಾಸಿ ಗಂಗಾಧರಪ್ಪಗೆ ಗ್ರಾಮಸ್ಥರು ಗೂಸ ತಿನ್ನಿಸಿದ್ದಾರೆ. ಕಳೆದ ನಾಲ್ಕು ದಿನಗಳಿಂದ ಗ್ರಾಮದ 9 ವರ್ಷದ ಆಪ್ರಾಪ್ತ ಬಾಲಕಿಗೆ ಚಾಕಲೇಟ್ ಹಾಗೂ ಹಣ ನೀಡುವುದಾಗಿ ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ಯತ್ತಿದ್ದ ಗಂಗಧಾರಪ್ಪ ಬಾಲಕಿಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಗಂಗಾಧರಪ್ಪನ ಕೃತ್ಯದಿಂದ ಅಸ್ವಸ್ಥಳಾಗಿದ್ದ ಬಾಲಕಿ ಹೊಟ್ಟೆ ನೋವಿನಿಂದ ನರಳಿದ್ದಾಳೆ.

ಗಂಗಾಧರಪ್ಪ ಶಾಲೆಯಿಂದ ಮನೆಗೆ ಹೋಗುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಮನೆಗೆ ಕರೆದುಕೊಂಡು ಹೋಗಿ ಬಾಗಿಲನ್ನು ಹಾಕಿಕೊಂಡಿದ್ದನ್ನು ಕಂಡ ಗ್ರಾಮಸ್ಥನೊಬ್ಬನು ಬಾಲಕಿಯ ಪೋಷಕರಿಗೆ ವಿಷಯ ತಿಳಿಸಿದ್ದಾನೆ. ತಕ್ಷಣ ಸ್ಥಳಕ್ಕಾಗಮಿಸಿದ ಬಾಲಕಿಯ ಪೋಷಕರು ಗಂಗಾಧರಪ್ಪನ ಮನೆಗೆ ಪ್ರವೇಶಿಸಿ ನೋಡಿದಾಗ ಮನೆಯಲ್ಲಿ ಬಾಲಕಿ ವಿವಸ್ತ್ರಾಳಾಗಿದ್ದನ್ನು ಕಂಡಿದ್ದಾರೆ. ಆಗ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಇದೇ ವೇಳೆ ಸ್ಥಳದಲ್ಲಿ ಜಮಾಯಿಸಿದ ಗ್ರಾಮಸ್ಥರು ಗಂಗಾಧರಪ್ಪನನ್ನು ಹಿಡಿದು ಹಿಗ್ಗಾ-ಮಗ್ಗಾ ಥಳಿಸಿ ಮಂಚೆನಹಳ್ಳಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೂ ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ತನಿಖೆ ನಡೆಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾದ ಮಮತಾ ಬ್ಯಾನರ್ಜಿ

ಮಧ್ಯಪ್ರಾಚ್ಯ ಸಂಘರ್ಷ: ಯಾವುದೇ ಇಂಧನ ಕೊರತೆಯಿಲ್ಲ

ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಿದ್ದರಾಮಯ್ಯ

ಮದುವೆ ನೆಪದಲ್ಲಿ ಯುವತಿಗೆ ದೋಖಾ: ಮಗು, ಸಂತ್ರಸ್ತೆ ಪಾಲನೆಗೆ ಕೃಷ್ಣ ಜೆ ರಾವ್‌ ಎಷ್ಟು ಹಣ ನೀಡಬೇಕು ಗೊತ್ತಾ

ಉಡುಪಿ: ನಾಪತ್ತೆಯಾಗಿದ್ದ ಉಪನ್ಯಾಸಕನ ಶವ ಬಾವಿಯಲ್ಲಿ ಪತ್ತೆ, ಆತ್ಮಹತ್ಯೆ ಶಂಕೆ

ಮುಂದಿನ ಸುದ್ದಿ
Show comments