Webdunia - Bharat's app for daily news and videos

Install App

ಸಿದ್ದರಾಮಯ್ಯ ಸಾಬ್ ಎಂದು ಕೂಗಿದ ಮಹಿಳೆ ರಾಬಿಯಾಗೆ ಫಟಾಫಟ್ ನಿವೇಶನ ಮಂಜೂರು

Krishnaveni K
ಬುಧವಾರ, 4 ಡಿಸೆಂಬರ್ 2024 (12:44 IST)
ತುಮಕೂರು: ಎಷ್ಟೋ ಜನರಿಗೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿ ವರ್ಷಗಳೇ ಕಳೆದರೂ ಮಂಜೂರಾಗದೇ ಕಚೇರಿಗಳಿಗೆ ಅಲೆದಾಡಬೇಕಾಗುತ್ತದೆ. ಆದರೆ ಇಲ್ಲೊಬ್ಬ ಮಹಿಳೆ ಸಿಎಂ ಸಿದ್ದರಾಮಯ್ಯನವರನ್ನು ಸಿದ್ದರಾಮಯ್ಯ ಸಾಬ್ ಎಂದು ಕರೆದು ಗಮನ ಸೆಳೆದು ತನಗೆ ಬೇಕಾದ ಸೈಟು ಗಿಟ್ಟಿಸಿಕೊಂಡಿದ್ದಾಳೆ.

ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ತುಮಕೂರಿಗೆ ಕಾರ್ಯಕ್ರಮ ನಿಮಿತ್ತ ತೆರಳಿದ್ದರು. ಕಾರ್ಯಕ್ರಮಕ್ಕೆ ಬಂದಿದ್ದ ರಾಬಿಯಾ ತನಗೆ ನಿವೇಶನ ಮಂಜೂರು ಮಾಡಿಕೊಡುವಂತೆ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಳು ಪ್ರಯತ್ನಿಸಿದ್ದಳು. ಆದರೆ ಸಿಎಂ ಭೇಟಿಯಾಗಲು ಸಾಧ್ಯವಾಗಲಿಲ್ಲ.

ಹೀಗಾಗಿ ಸಿದ್ದರಾಮಯ್ಯ ವೇದಿಕೆ ಬಿಟ್ಟು ತೆರಳುತ್ತಿದ್ದಾಗ ಪೊಲೀಸರು ಅಡ್ಡಗಟ್ಟಿದರೂ ಬಿಡದೇ ಸಿದ್ದರಾಮಯ್ಯ ಸಾಬ್ ಎಂದು ಜೋರಾಗಿ ಕೂಗಿದ್ದಾಳೆ. ಆಕೆ ಕೂಗಿದ್ದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಆಕೆಯ ಸಮಸ್ಯೆಯೇನೆಂದು ತಿಳಿದುಕೊಂಡು ಪರಿಹಾರ ನೀಡುವಂತೆ ಸೂಚಿಸಿದ್ದರು.

ಸಿಎಂ ಸೂಚನೆ ನೀಡಿದ ಬೆನ್ನಲ್ಲೇ ಕಾರ್ಯಪ್ರವೃತ್ತವಾದ ಜಿಲ್ಲಾಡಳಿತ ಆಕೆಯನ್ನು ಸಂಪರ್ಕಿಸಿದೆ. ಸಮಸ್ಯೆ ತಿಳಿದ ಒಂದೇ ದಿನದಲ್ಲಿ ರಾಬಿಯಾಗೆ 20/30 ಅಳತೆಯ ನಿವೇಶನವನ್ನೂ ಮಂಜೂರು ಮಾಡಿದೆ. ರಾಬಿಯಾ ಬಡ ಕುಟುಂಬದವಳಾಗಿದ್ದು, ಆಶ್ರಯ ಯೋಜನೆಯಡಿ ನಿವೇಶನ ನೀಡಲು ಸೆಪ್ಟೆಂಬರ್ 25 ರಂದು ಆಶ್ರಯ ಸಮಿತಿ ನಿರ್ಣಯ ಕೈಗೊಂಡಿತ್ತು. ಆದರೆ ಇದುವರೆಗೆ ಸೈಟು ನೀಡದೇ ಅಧಿಕಾರಿಗಳು ಸತಾಯಿಸಿದ್ದರು. ಹೀಗಾಗಿ ನೇರವಾಗಿ ಸಿದ್ದರಾಮಯ್ಯನವರ ಗಮನ ಸೆಳೆದು ತನಗೆ ಬೇಕಾದ ಸೈಟು ಗಿಟ್ಟಿಸಿಕೊಂಡಿದ್ದಾಳೆ. ಇದೀಗ ಗೃಹಸಚಿವ ಜಿ ಪರಮೇಶ್ವರ್ ಆಶ್ರಯ ಸಮಿತಿ ಸಭೆಯ ನಡಾವಳಿ ಪತ್ರವನ್ನು ರಾಬಿಯಾಗೆ ನೀಡಿದ್ದು ಶೀಘ್ರದಲ್ಲೇ ಮನೆ ಕೊಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments