Webdunia - Bharat's app for daily news and videos

Install App

ತುಂಗಭದ್ರಾ ಅಣೆಕಟ್ಟೆ ಗೇಟು ಮುರಿತ: ಕಾರಣ ಪತ್ತೆಗೆ ತಜ್ಞರ ತಂಡ ಆಗಮನ

Sampriya
ಸೋಮವಾರ, 9 ಸೆಪ್ಟಂಬರ್ 2024 (17:42 IST)
ಹೊಸಪೇಟೆ: ತುಂಗಭದ್ರಾ ಅಣೆಕಟ್ಟೆಯ 19ನೇ ಕ್ರಸ್ಟ್‌ಗೇಟ್ ಮುರಿದು ಕೊಚ್ಚಿಹೋಗಲು ಕಾರಣ ತಿಳಿಯಲು ಕೇಂದ್ರ ಜಲ ಆಯೋಗದ (ಸಿಡಬ್ಲ್ಯುಸಿ) ಮಾಜಿ ಅಧ್ಯಕ್ಷ ಎ.ಕೆ.ಬಜಾಜ್‌ ನೇತೃತ್ವದ ತಾಂತ್ರಿಕ ತಜ್ಞರ ತನಿಖಾ ತಂಡ ಸೋಮವಾರ ಅಣೆಕಟ್ಟೆಗೆ ಬಂದು ವೀಕ್ಷಣೆ ನಡೆಸಿದೆ.

ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ಗೇಟ್ ಲಿಂಕ್ ಮುರಿದು ಕೊಚ್ಚಿಹೋದ ಪರಿಣಾಮ ಅಪಾರ ಪ್ರಮಾಣದ ನೀರು ನದಿಗೆ ಹರಿಸಲಾಯಿತು. ಈಗಾಗಲೇ ತಾತ್ಕಲಿಕ ಗೇಟ್‌ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.

ಇದೀಗ ಸ್ಥಳಕ್ಕೆ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ತಂಡದಲ್ಲಿ ಸುಮಾರು ಆರು ಮಂದಿ ಇದ್ದರು. ಕ್ರಸ್ಟ್‌ಗೇಟ್‌ಗಳ ಸಾಮರ್ಥ್ಯದ ಸಹಿತ ಹಲವು ಆಯಾಮಗಳಲ್ಲಿ ಪರಿಶೀಲನೆ ನಡೆಸಿದರು ಎಂದು ತುಂಗಭದ್ರಾ ಅಣೆಕಟ್ಟೆಯ ಮೂಲಗಳು ತಿಳಿಸಿವೆ.

ವೀಕ್ಷಣೆ ವೇಳೆ ಚೈನ್‌ ಲಿಂಕ್‌ನ ಬಲದೊಂದಿಗೆ ಲಂಬವಾಗಿ ನಿಂತಿದ್ದ ಕ್ರಸ್ಟ್‌ಗೇಟ್ ಕಳಚಿಕೊಳ್ಳಲು ನಿಜವಾಗಿ ಕಾರಣವೇನು, ಮಳೆಗಾಲಕ್ಕೆ ಮೊದಲು ಮತ್ತು ನಂತರ ಗೇಟ್‌ ಮತ್ತು ಚೈನ್‌ಲಿಂಕ್‌ಗಳನ್ನು ಆಗಾಗ್ಗೆ ಪರೀಕ್ಷಿಸಲಾಗುತ್ತಿತ್ತೇ, ಕ್ರಸ್ಟ್‌ಗೇಟ್‌ಗಳ ಆಯಸ್ಸು, ಕೊನೆಯ ಬಾರಿಗೆ ಮಾಡಿದ ದುರಸ್ತಿ ಮೊದಲಾದ ಅಂಶಗಳನ್ನು ತಂಡ ಕೂಲಂಕಷವಾಗಿ ಪರಿಶೀಲಿಸಲಿದ್ದು, ಮುಂದೆ ಇಂತಹ ದುರಂತ ಸಂಭವಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಶಿಫಾರಸು ಮಾಡಲಿದೆ ಎಂದು ಹೇಳಲಾಗಿದೆ.

ಈ ತಂಡಕ್ಕೆ ವರದಿ ಸಲ್ಲಿಸಲು 15 ದಿನಗಳ ಗಡುವು ನೀಡಲಾಗಿದ್ದು, ಶೀಘ್ರದಲ್ಲೇ ಈ ಸಂಬಂಧ ವರದಿ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments