Webdunia - Bharat's app for daily news and videos

Install App

ತುಂಗಭದ್ರಾ ಅಣೆಕಟ್ಟೆಗೆ ಗೇಟ್‌ ಇಳಿಸುವ ಕಾರ್ಯ ಆರಂಭ: ವಿಡಿಯೊಗ್ರಫಿ ಸಂಪೂರ್ಣ ನಿಷೇಧ

Sampriya
ಗುರುವಾರ, 15 ಆಗಸ್ಟ್ 2024 (14:08 IST)
ವಿಜಯನಗರ: ಇಲ್ಲಿನ ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್‌ನ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಸುವ ಪ್ರಯತ್ನ ಆರಂಭಗೊಂಡಿದೆ.  ಇಂದು ಮಧ್ಯಾಹ್ನ ಗೇಟ್‌ ಇಳಿಸುವ ಪ್ರಾಯೋಗಿಕ ಪರೀಕ್ಷೆ ಶುರು ಮಾಡಲಾಗಿದೆ.

ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ವಿಡಿಯೊಗ್ರಫಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಮೊದಲ ಗೇಟ್ ಅನ್ನು ಗುರುವಾರ ಬೆಳಿಗ್ಗೆ ತುಂಗಭಧ್ರಾ ಅಣೆಕಟ್ಟೆಯ ಬಲದಂಡೆಗೆ ತರಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ 24 ಗಾಲಿಗಳನ್ನು ಒಳಗೊಂಡ ಬೃಹತ್ ಟ್ರಕ್‌ ಸುಮಾರು 13 ಟನ್‌ ತೂಕದ ಗೇಟ್ ಎಲಿಮೆಂಟ್ ಅನ್ನು ಅಣೆಕಟ್ಟೆಯ ಒಳಗೆ ಕೊಂಡೊಯ್ದಿತು. 19ನೇ ಗೇಟ್‌ ಸಮೀಪಕ್ಕೆ ತಲುಪಿದ ತಕ್ಷಣ ಧುಮ್ಕಿಕ್ಕಿ ಹರಿಯುತ್ತಿರುವ ನೀರಲ್ಲೇ ಗೇಟ್ ಇಳಿಸುವ ಪ್ರಯೋಗ ಆರಂಭವಾಯಿತು.

ತುಂಗಭದ್ರಾ ಅಣೆಕಟ್ಟೆಯ ಕೆಳಭಾಗದಲ್ಲಿ ನದಿ ಎರಡು ಕವಲಾಗಿ ಹರಿಯುತ್ತದೆ. ಇಲ್ಲಿಯೇ ಹಳೆ ಸೇತುವೆ ಸಹ ಹಾದು ಹೋಗುತ್ತದೆ. ಅಲ್ಲಿಗೆ ಸಹ ಜನರು ತೆರಳುವುದಕ್ಕೆ ಸದ್ಯ ಅವಕಾಶ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments